ಸ್ಪೀಕರ್ ಯು.ಟಿ.ಖಾದರ್‌ರವರಿಗೆ ದಿ ಗ್ರೇಟ್ ಸನ್ ಆಫ್ ಇಂಡಿಯಾ ಪ್ರಶಸ್ತಿ ಪ್ರದಾನ

0

ಪುತ್ತೂರು:ಕರ್ನಾಟಕ ವಿಧಾನಸಭೆಯ ಸ್ಪೀಕರ್, ಕಡಬ ಮೂಲದ ಯು.ಟಿ.ಖಾದರ್ ಅವರಿಗೆ ಇಂಡಿಯನ್ ಕಾನರೆನ್ಸ್ ಆಫ್ಇಂಟೆಲೆಕ್ಚುವಲ್ಸ್ ಸಂಸ್ಥೆಯಿಂದ ನೀಡಲಾಗುವ ದಿ ಗ್ರೇಟ್ ಸನ್ ಆಫ್ ಇಂಡಿಯಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಪ್ರಶಸ್ತಿ ಪ್ರದಾನ ಸಮಾರಂಭ ಜು.16ರಂದು ಹೊಸದಿಲ್ಲಿಯಲ್ಲಿ ಜರುಗಿತು.

ಹೊಸದಿಲ್ಲಿಯ ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್‌ನಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.ಇಂಡಿಯನ್ ಕಾನರೆನ್ಸ್ ಆಫ್ ಇಂಟೆಲೆಕ್ಚುವಲ್ಸ್ ಸಂಸ್ಥೆಯ ಅಧ್ಯಕ್ಷರಾಗಿರುವ ಒಡಿಶಾ ಹೈಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಹಾಗೂ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳೂ ಆಗಿರುವ ಗೋಪಾಲ್ ಗೌಡ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಛತ್ತೀಸ್‌ಗಢ ರಾಜ್ಯಪಾಲ ಬಿಸ್ವ ಭೂಷಣ ಹರಿಚರಣ್, ಇತರ ಗಣ್ಯರು ಉಪಸ್ಥಿತರಿದ್ದರು.ಬಿಸ್ವ ಭೂಷಣ್ ಹರಿಚರಣ್ ಅವರ ಆತ್ಮಕತೆ ಬ್ಯಾಟಲ್ ನಾಟ್ ಓವರ್‌ ಕೃತಿಯ ಇಂಗ್ಲೀಷ್ ಅನುವಾದ ಇದೇ ಸಂದರ್ಭ ಬಿಡುಗಡೆಗೊಂಡಿತು.

LEAVE A REPLY

Please enter your comment!
Please enter your name here