“ಸರಸ್ವತಿ ಪುರಸ್ಕಾರ” ಪ್ರಶಸ್ತಿಗೆ ಆಯ್ಕೆಯಾದ ಸಿಂಚನ ಬಿ

0

ಪುತ್ತೂರು: ದಾವಣಗೆರೆಯ ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನದಿಂದ ಶೈಕ್ಷಣಿಕ ಸಾಧಕಿ ಸಿಂಚನ ಬಿ “ಸರಸ್ವತಿ ಪುರಸ್ಕಾರ” ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕಳೆದ 36 ವರ್ಷಗಳಿಂದ ನಿರಂತರವಾಗಿ ಕಲೆ ಸಾಹಿತ್ಯ ಸಂಗೀತ ಸಂಸ್ಕೃತಿ ಕನ್ನಡ ನಾಡು ನುಡಿ ಇತಿಹಾಸ ಪರಂಪರೆಗಳನ್ನು ವೈಭವ್ಯಕರಿಸುವ ನಿಟ್ಟಿನಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿರುವ ಸಾಂಸ್ಕೃತಿಕ ಸಂಸ್ಥೆ ಕಲ ಕುಂಚದಿಂದ 2022 23 ನೇ ಸಾಲಿನ ‘ಕನ್ನಡ ಕೌಸ್ತುಭ’ ರಾಜ್ಯ ಪ್ರಶಸ್ತಿಗೂ ಆಯ್ಕೆ ಮಾಡಲಾಗಿದೆ.

2023 ನೇ ಸಾಲಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ಪರೀಕ್ಷೆಯಲ್ಲಿ ಒಟ್ಟು ಅಂಕ 625 ಕ್ಕೆ 601 ಅಂಕ ಪಡೆದ ಇವರು ಕನ್ನಡದಲ್ಲಿ 125 ರಲ್ಲಿ 125 ಅಂಕ ಪಡೆದು ಸಾಧನೆ ಮಾಡಿದ್ದಾರೆ.

ಇವರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದ ದೈಹಿಕ ಶಿಕ್ಷಕಿ ನಮಿತಾ ಹಾಗೂ ಸುದ್ದಿ ಬಿಡುಗಡೆ ಪತ್ರಿಕೆಯ ನಿತ್ಯಾನಂದ ಬೈಲಾಡಿ ಅವರ ಪುತ್ರಿ.

LEAVE A REPLY

Please enter your comment!
Please enter your name here