ಜು.23:ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ 47ನೇ ಮಹಾಸಭೆ

0

ಪುತ್ತೂರು:ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ 47ನೇ ಮಹಾಸಭೆ ಜು.23ರಂದು ಬೆಳಿಗ್ಗೆ 10.30ರಿಂದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ವಾರ್ಷಿಕ ವರದಿ, ಲೆಕ್ಕಪತ್ರ ಮಂಡನೆ, ಗುರುಮಂದಿರದ ಲೆಕ್ಕಪತ್ರ ಮಂಡನೆ ಜೊತೆಗೆ 2023-24 ಮತ್ತು 2024-25ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿ ಸದಸ್ಯರ ಪಟ್ಟಿ ಘೋಷಣೆ, ಚುನಾವಣಾಧಿಕಾರಿ ಆಯ್ಕೆಯೂ ಮಹಾಸಭೆಯಲ್ಲಿ ನಡೆಯಲಿದೆ.ಸಂಘದ ಸದಸ್ಯರೆಲ್ಲರೂ ಆಗಮಿಸಿ ಸೂಕ್ತ ಸಲಹೆ,ಸೂಚನೆಗಳನ್ನು ನೀಡುವಂತೆ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಪ್ರಭಾರ ಕಾರ್ಯದರ್ಶಿ ಚಿದಾನಂದ ಸುವರ್ಣ, ಉಪಾಧ್ಯಕ್ಷರಾದ ಡಾ.ಸದಾನಂದ ಕುಂದರ್, ಶ್ರೀಮತಿ ಚಂದ್ರಕಲಾ, ಕೋಶಾಽಕಾರಿ ಬಿ.ಟಿ.ಮಹೇಶ್ಚಂದ್ರ ಸಾಲಿಯಾನ್ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here