ಯಕ್ಷ ಬಾನುಲಿ ಸರಣಿ ತಾಳಮದ್ದಳೆ

0

ಪುತ್ತೂರು: ಡಿಸೆಂಬರ್ -2023ರಲ್ಲಿ ನಡೆಯಲಿರುವ ’ಶ್ರೀ ಆಂಜನೇಯ 55’ರ ಸಂಭ್ರಮಕ್ಕೆ ಪೂರಕವಾಗಿ, ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ ಅವರ ಸಂಯೋಜನೆಯಲ್ಲಿ ರೂಪುಗೊಂಡು ಪ್ರಾರಂಭವಾದ ’ಯಕ್ಷ ಬಾನುಲಿ ಸರಣಿ ತಾಳಮದ್ದಳೆ ’ಎಂಬ ಕಾರ್ಯಕ್ರಮದಡಿಯಲ್ಲಿ ಜು.21ರಂದು, ರೇಡಿಯೋ ಪಾಂಚಜನ್ಯದಲ್ಲಿ ’ಯಕ್ಷ ದಾಂಪತ್ಯ’ ತಾಳಮದ್ದಳೆ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಶ್ರೀಪತಿ ನಾಯಕ್ ಆಜೇರು, ಕುಸುಮಾಕರ ಆಚಾರ್ಯ ಹಳೇನೇರಂಕಿ , ಚೆಂಡೆ ಮದ್ದಳೆಗಳಲ್ಲಿ, ಮುರಳೀಧರ ಕಲ್ಲೂರಾಯ, ಆದಿತ್ಯ ನಾರಾಯಣ ಸಹಕರಿಸಿದರು. ಮುಮ್ಮೇಳದಲ್ಲಿ ಪೂಕಳ ಲಕ್ಷ್ಮೀ ನಾರಾಯಣ ಭಟ್ (ಭೀಮ) ಹರಿಣಾಕ್ಷಿ.ಜೆ.ಶೆಟ್ಟಿ(ದ್ರೌಪದಿ), ದಿವಾಕರ ಆಚಾರ್ಯ ಗೇರುಕಟ್ಟೆ (ಲಕ್ಷ್ಮಣ), ಶುಭಾ ಗಣೇಶ್ (ಊರ್ಮಿಳೆ) ಸಹಕರಿಸಿದರು. ತೇಜಸ್ವಿನಿ ಕೆಮ್ಮಿಂಜೆ ಹಾಗೂ ಪ್ರಶಾಂತ್ ಕಾರ್ಯಕ್ರಮ ನಿರ್ವಹಣೆ ಮಾಡಿದರು.

LEAVE A REPLY

Please enter your comment!
Please enter your name here