ಎಡನೀರು ಮಠದಲ್ಲಿ ಚಾತುರ್ಮಾಸ್ಯ ವ್ರತಾಚರಣೆ ಕಾರ್ಯಕ್ರಮದಲ್ಲಿ ಬೊಳುವಾರು ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ತಾಳಮದ್ದಳೆ

0

ಪುತ್ತೂರು: ಎಡನೀರು ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ಸಂಸ್ಥಾನದಲ್ಲಿ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳವರ ತೃತೀಯ ಚಾತುರ್ಮಾಸ್ಯ ವ್ರತಾಚರಣೆಯ ಅಂಗವಾಗಿ ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘದ ವತಿಯಿಂದ ಜು.26ರಂದು “ಭೀಷ್ಮ ಪ್ರತಿಜ್ಞೆ” ಎಂಬ ಯಕ್ಷಗಾನ ತಾಳಮದ್ದಳೆ ನಡೆಯಿತು.
ಹಿಮ್ಮೇಳದಲ್ಲಿ ಭಾಗವತರಾಗಿ ರಮೇಶ್ ಭಟ್ ಪುತ್ತೂರು, ಚೆಂಡೆ ಮದ್ದಳೆಗಳಲ್ಲಿ ಲವ ಕುಮಾರ್ ಐಲ, ಮುರಳೀಧರ ಕಲ್ಲೂರಾಯ ಕುಂಜೂರುಪಂಜ ಸಹಕರಿಸಿದರು. ಮುಮ್ಮೇಳದಲ್ಲಿ ಭಾಸ್ಕರ್ ಬಾರ್ಯ (ಶಂತನು), ಗುಂಡ್ಯಡ್ಕ ಈಶ್ವರ ಭಟ್ (ದೇವವ್ರತ), ಕುಂಬ್ಳೆ ಶ್ರೀಧರ್ ರಾವ್ (ದಾಶರಾಜ), ಭಾಸ್ಕರ ಶೆಟ್ಟಿ ಸಾಲ್ಮರ (ಸತ್ಯವತಿ) ಸಹಕರಿಸಿದರು. ಮಠದ ವತಿಯಿಂದ ಭಾಸ್ಕರ ಬಾರ್ಯ ಸ್ವಾಗತಿಸಿ ರಾಜೇಂದ್ರ ಕಲ್ಲೂರಾಯ ವಂದಿಸಿದರು.

LEAVE A REPLY

Please enter your comment!
Please enter your name here