ಉಪ್ಪಿನಂಗಡಿ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಕಾರ್ಯದರ್ಶಿಯಾಗಿ ಹರೀಶ್ ನಾಯಕ್ ನಟ್ಟಿಬೈಲು

0

ಉಪ್ಪಿನಂಗಡಿ: ಇಲ್ಲಿನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ 47 ನೇ ವರ್ಷದ ಅಧ್ಯಕ್ಷರಾಗಿ ಅಶೋಕ್ ಕುಮಾರ್ ರೈ ಅರ್ಪಿನಿಗುತ್ತು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಸಮಿತಿಯ ಉಪಾಧ್ಯಕ್ಷರಾಗಿ ಜಯಂತ ಪೊರೋಳಿ, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ನಾಯಕ್ ನಟ್ಟಿಬೈಲು, ಜೊತೆ ಕಾರ್ಯದರ್ಶಿಗಳಾಗಿ ಕೀರ್ತನ್ ಕುಮಾರ್ ಶೆಟ್ಟಿ, ಚಂದ್ರಹಾಸ ಹೆಗ್ಡೆ, ಕೋಶಾಧಿಕಾರಿಯಾಗಿ ರವೀಶ್ ಎಚ್.ಟಿ. ಆಯ್ಕೆಯಾಗಿದ್ದಾರೆ.

47 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವನ್ನು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಸುವುದೆಂದು ತೀರ್ಮಾನಿಸಲಾಯಿತು. ಸಭೆಯಲ್ಲಿ ಸಮಿತಿಯ ಪೂರ್ವಾಧ್ಯಕ್ಷರುಗಳಾದ ವಿಜಯಕುಮಾರ್ ಕಲ್ಲಳಿಕೆ, ಪುರುಷೋತ್ತಮ ಮುಂಗ್ಲಿಮನೆ, ಎನ್ ಗೋಪಾಲ ಹೆಗ್ಡೆ, ಯತೀಶ್ ಶೆಟ್ಟಿ, ಬಿಪಿನ್, ವಿದ್ಯಾಧರ ಜೈನ್, ಆದೇಶ್ ಶೆಟ್ಟಿ, ಸುಧಾಕರ ಶೆಟ್ಟಿ, ಕಿಶೋರ್ ಕುಮಾರ್ ಜೋಗಿ, ರಾಮಚಂದ್ರ ಮಣಿಯಾಣಿ, ಚಂದ್ರಶೇಖರ್ ಮಡಿವಾಳ, ಶರತ್ ಕೋಟೆ, ಗಂಗಾಧರ ಟೈಲರ್, ಕಂಗ್ವೆ ವಿಶ್ವನಾಥ ಶೆಟ್ಟಿ, ದೀಪಕ್ ಪೈ, ಜಯಪ್ರಕಾಶ್ ಶೆಟ್ಟಿ, ರೂಪೇಶ್ ರೈ, ಮತ್ತಿತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here