ಉಡುಪಿ ಕಾಲೇಜು ಪ್ರಕರಣ ಖಂಡಿಸಿ ಎಬಿವಿಪಿಯಿಂದ ಪ್ರತಿಭಟನೆ

0

ಪುತ್ತೂರು:ಉಡುಪಿಯ ಕಾಲೇಜು ವಿದ್ಯಾರ್ಥಿನಿಯರ ಖಾಸಗಿ ದೃಶ್ಯವನ್ನು ಸೆರೆ ಹಿಡಿಯಲಾಗಿದೆ, ಮೂವರು ಮುಸ್ಲಿಂ ವಿದ್ಯಾರ್ಥಿನಿಯರ ವಿರುದ್ಧ ಕೇಸು ದಾಖಲಿಸಲು ವಿಳಂಬ ಧೋರಣೆ ತೋರುವ ಜತೆ ಪ್ರಕರಣವನ್ನು ಮುಚ್ಚಿಹಾಕಲು ಕಾಂಗ್ರೆಸ್ ಸರ್ಕಾರದ ಯುತ್ನಿಸುತ್ತಿದೆ ಎಂದು ಆರೋಪಿಸಿ ಎಬಿವಿಪಿ ಪುತ್ತೂರು ನೆಹರುನಗರ ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಯಿತು.

ರಾಜ್ಯ ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿ, ಪೊಲೀಸ್ ಇಲಾಖೆಗೆ ಧಿಕ್ಕಾರ ಕೂಗಿ ಮಹಿಳಾ ಶಕ್ತಿಗೆ ಅವಮಾನ ಮಾಡುವುದನ್ನು ಸಹಿಸುವುದಿಲ್ಲ, ಹೆಂಗಸರ ಸಮ್ಮಾನಕ್ಕೆ ಎಬಿವಿಪಿ ಇಳಿದಿದೆ ಮೈದಾನಕ್ಕೆ, ವಿ ವಾಂಟ್ ಜಸ್ಟೀಸ್ ಸಹಿತ ವಿದ್ಯಾರ್ಥಿಗಳಿಂದ ಘೋಷಣೆಗಳು ಮೊಳಗಿತು.

ಸ್ಥಳಕ್ಕೆ ಅರುಣ್‌ ಕುಮಾರ್‌ ಪುತ್ತಿಲ ಭೇಟಿ:
ಪ್ರತಿಭಟನಾ ಸ್ಥಳಕ್ಕೆ ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಭೇಟಿ ನೀಡಿದ್ದು ವಿದ್ಯಾರ್ಥಿಗಳಿಗೆ ಸಾಥ್‌ ನೀಡಿದ್ದಾರೆ.

LEAVE A REPLY

Please enter your comment!
Please enter your name here