ದ.ಕ ಜಿಲ್ಲಾ ಪದವೀಧರ ಘಟಕದ ಅಧ್ಯಕ್ಷರಾಗಿ ಉಲ್ಲಾಸ್ ಕೋಟ್ಯಾನ್ ನೇಮಕ

0

ಪುತ್ತೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಘಟಕದ ದ.ಕ ಜಿಲ್ಲಾ ಪದವೀಧರ ಘಟಕದ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ ಮುಂದಾಳು ಕೋಡಿಂಬಾಡಿ ನಿವಾಸಿ ಉಲ್ಲಾಸ್ ಕೋಟ್ಯಾನ್ ರವರನ್ನು ನೇಮಕಗೊಳಿಸಲಾಗಿದೆ.

ಶಾಸಕ ಅಶೋಕ್ ಕುಮಾರ್ ರೈಯವರ ಸಹಕಾರದಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಡಿಸಿಸಿ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್ ಇವರ ಶಿಫಾರಸ್ಸಿನ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪದವೀಧರ ಘಟಕದ ರಾಜ್ಯಾಧ್ಯಕ್ಷರಾದ ಡಾ.ಆರ್.ಎಂ ಕುಬೇರಪ್ಪರವರು ತಕ್ಷಣಕ್ಕೆ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪದವೀಧರ ಘಟಕವು ಪ್ರತಿ ಜಿಲ್ಲೆಗೊಂದು ಅಧ್ಯಕ್ಷರನ್ನು ನೇಮಕ ಮಾಡಿ ಜಿಲ್ಲೆ ಹಾಗೂ ತಾಲೂಕು ಸಂಘಟನೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಈ ಆಯ್ಕೆಯನ್ನು ಮಾಡಲಾಗಿದೆ.

LEAVE A REPLY

Please enter your comment!
Please enter your name here