![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಉಪ್ಪಿನಂಗಡಿ: ಇಲ್ಲಿನ ವನಿತಾ ಸಮಾಜದ ಆಶ್ರಯದಲ್ಲಿ ನಡೆಯುವ 26ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ರಾಮನಗರದಲ್ಲಿ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭ ಸಮಾಜದ ಹಿರಿಯರಾದ ಎನ್. ಉಮೇಶ್ ಶೆಣೈ, ವನಿತಾ ಸಮಾಜದ ಅಧ್ಯಕ್ಷೆ ಉಷಾಚಂದ್ರ ಮುಳಿಯ, ಪ್ರಧಾನ ಕಾರ್ಯದರ್ಶಿ ಪುಷ್ಪಲತಾ ಜನಾರ್ದನ, ಕೋಶಾಧಿಕಾರಿ ಶ್ಯಾಮಲಾ ಶೆಣೈ, ಜೊತೆ ಕಾರ್ಯದರ್ಶಿ ಸುಜಾತ ಕೃಷ್ಣ, ಪ್ರಮುಖರಾದ ಜ್ಯೋತಿ ಹೇರಂಭ ಶಾಸ್ತ್ರಿ, ಲತಾ, ಸೀತಾ, ಸುಗಂಧಿ, ಸುಮನ್, ಶೋಭಾ, ಶಶಿಕಲಾ, ಜಯಶ್ರೀ, ರೇಖಾ ಮತ್ತಿತರರು ಉಪಸ್ಥಿತರಿದ್ದರು.
ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ನೇತ್ರಾವತಿ ಸಮುದಾಯ ಭವನದಲ್ಲಿ ಆ.೮ರಂದು ಶ್ರೀ ವರಮಹಾಲಕ್ಷ್ಮೀ ವ್ರತ ಪೂಜಾ ಕಾರ್ಯಕ್ರಮ ನಡೆಯಲಿದೆ.
![](https://puttur.suddinews.com/wp-content/uploads/2023/08/4uppbidugade.jpg)