ಚರಣ್‌ರಾಜ್ ರೈ ಹತ್ಯೆ ಪ್ರಕರಣ:ಆರೋಪಿಗಳಿಗೆ ಆಶ್ರಯ ಆರೋಪಿ ಪ್ರಜ್ವಲ್‌ಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು

0

ಪುತ್ತೂರು:ವರ್ಷದ ಹಿಂದೆ ಪೆರ್ಲಂಪಾಡಿಯಲ್ಲಿ ನಡೆದ ಚರಣ್‌ರಾಜ್ ರೈ ಹತ್ಯೆ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪಿ ಪ್ರಜ್ವಲ್‌ರವರಿಗೆ ಕರ್ನಾಟಕ ಉಚ್ಚ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.


ದಿನಾಂಕ 4.06.2022ರಂದು, ಚರಣ್‌ರಾಜ್‌ರವರ ಮಾವ ಕಿಟ್ಟಣ್ಣ ರೈ ಎಂಬವರು ಪೆರ್ಲಂಪಾಡಿ ಎಂಬಲ್ಲಿ ಮೆಡಿಕಲ್ ಶಾಪ್ ಪ್ರಾರಂಭಿಸುವವರಿದ್ದ ಹಿನ್ನೆಲೆಯಲ್ಲಿ ಪೂರ್ವ ತಯಾರಿ ಕೆಲಸಕ್ಕೆ ಸಹಾಯ ಮಾಡಲು ಚರಣ್‌ರಾಜ್ ಸ್ನೇಹಿತ ನವೀನ್ ಕುಮಾರ್ ಕಾರಿನಲ್ಲಿ ಪೆರ್ಲಂಪಾಡಿಗೆ ತೆರಳಿ ಮೆಡಿಕಲ್ ಶಾಪ್ ಬಳಿ ಕೆಲಸದಲ್ಲಿ ತೊಡಗಿದ್ದರು.ಈ ವೇಳೆ ಚರಣ್‌ರಾಜ್ ರೈರವರು ಹೊರಗಡೆ ಬಂದು ಕಾರಿನ ಬಳಿ ಮೊಬೈಲ್ ಫೋನಲ್ಲಿ ಮಾತನಾಡುತ್ತಿದ್ದಾಗ ದುಷ್ಕರ್ಮಿಗಳು ಅವರಿಗೆ ಹಲ್ಲೆ ಮಾಡಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪ್ರಕರಣದಲ್ಲಿ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಡಿ ೭ನೇ ಆರೋಪಿಯನ್ನಾಗಿ ಪ್ರಜ್ವಲ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿತ್ತು.ಆ ಬಳಿಕ ಪ್ರಜ್ವಲ್‌ರವರು ನಿರೀಕ್ಷಣಾ ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರು ಆರೋಪಿ ಪ್ರಜ್ವಲ್‌ಗೆ ಷರತ್ತು ಬದ್ಧ ಜಾಮೀನು ಮಂಜೂರುಗೊಳಿಸಿದ್ದಾರೆ.ಆರೋಪಿ ಪರ ವಕೀಲರಾದ ರಾಜಶೇಖರ ಎಸ್ ಮತ್ತು ಮಹೇಶ್ ಕಜೆ ಅವರು ವಾದಿಸಿದ್ದರು

LEAVE A REPLY

Please enter your comment!
Please enter your name here