ಗೋಳಿತ್ತೊಟ್ಟು: ಕಾಡಾನೆ ದಾಳಿಗೆ ಬಾಳೆಕೃಷಿ ಹಾನಿ

0

ನೆಲ್ಯಾಡಿ: ಶಿವಾರು ರಕ್ಷಿತಾರಣ್ಯಕ್ಕೆ ಹೊಂದಿಕೊಂಡಿರುವ ಗೋಳಿತ್ತೊಟ್ಟು ಗ್ರಾಮದ ಅಂಬರ್ಜೆ ಎಂಬಲ್ಲಿ ಕಾಡಾನೆ ದಾಳಿ ನಡೆಸಿ ಕೃಷಿ ಹಾನಿಗೊಳಿಸಿರುವ ಘಟನೆ ಆ.6ರಂದು ರಾತ್ರಿ ನಡೆದಿದೆ.


ಅಂಬರ್ಜೆ ನಿವಾಸಿ ವೀರಪ್ಪ ಪೂಜಾರಿ ಎಂಬವರ ತೋಟಕ್ಕೆ ನುಗ್ಗಿರುವ ಕಾಡಾನೆ ಅಪಾರ ಪ್ರಮಾಣದ ಬಾಳೆ ಕೃಷಿ ನಾಶಗೊಳಿಸಿದೆ ಎಂದು ವರದಿಯಾಗಿದೆ. ಇದರಿಂದಾಗಿ ವೀರಪ್ಪ ಪೂಜಾರಿಯವರಿಗೆ ಸಾವಿರಾರೂ ನಷ್ಟ ಸಂಭವಿಸಿದೆ. ಈ ಪ್ರದೇಶದ ಗೇರು ತೋಪಿನಲ್ಲಿ ರಾತ್ರಿ ವೇಳೆ ಒಂಟಿ ಆನೆಯೊಂದು ವ್ಯಕ್ತಿಯೊಬ್ಬರಿಗೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಈ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುತ್ತಿರುವುದಾಗಿಯೂ ವರದಿಯಾಗಿದೆ. ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿ ಸುನಿಲ್, ಅರಣ್ಯ ರಕ್ಷಕ ದುರ್ಗಾಪ್ರಸಾದ್‌ರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here