![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ಸಹಯೋಗದಲ್ಲಿ ಆ.3ರಂದು ನಡೆದ ಜಿಲ್ಲಾ ಮಟ್ಟದ 17ರ ವಯೋಮಿತಿಯ ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಚದುರಂಗ ಸ್ಪರ್ಧೆಯಲ್ಲಿ ಸುದಾನ ಶಾಲೆಯ ಜೆಸಿತ್ ಸಿ.ಎಸ್ (9ನೇ) ಇವರು ಸ್ಪರ್ಧಿಸಿ ವಿಜೇತರಾಗಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಾಲೆಯ ಸಂಚಾಲಕ ವಿಜಯ ಹಾರ್ವಿನ್, ಮುಖ್ಯ ಶಿಕ್ಷಕಿ ಶೋಭಾ ನಾಗರಾಜ್ ಮತ್ತು ದೈಹಿಕ ಶಿಕ್ಷಕರು ಶುಭ ಹಾರೈಸಿದರು.
![](https://puttur.suddinews.com/wp-content/uploads/2023/08/State-Level-Chess.jpeg)