ಆ.11ಕ್ಕೆ ನಗರಸಭೆಯಿಂದ ಸ್ವ ನಿಧಿಯಿಂದ ಸಮೃದ್ಧಿ ಮೇಳ, ಮೈ ಬೀ ಡಿಜಿಟಲ್ ಕ್ಯಾಂಪ್

0

ಪುತ್ತೂರು: ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿ ಸ್ವ-ನಿಧಿ ಯೋಜನೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಕಿರು ಸಾಲ ಸೌಲಭ್ಯ ಪಡೆದ ಎಲ್ಲಾ ಬೀದಿ ಬದಿ ವ್ಯಾಪಾರಿಗಳ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಿ ಆಯ್ಕೆಯಾದ ಫಲಾನುಭವಿಗಳಿಗೆ ಆ.11ರಂದು ಪುತ್ತೂರು ನಗರಸಭೆಯಲ್ಲಿ ಸ್ವ ನಿಧಿಯಿಂದ ಸಮೃದ್ಧಿ ಮೇಳ ಮತ್ತು ಮೈ ಬೀ ಡಿಜಿಟಲ್ ಆಯೋಜಿಸಲಾಗಿದೆ.
ಕಿರು ಸಾಲ ಸೌಲಭ್ಯ ಪಡೆದ ಎಲ್ಲಾ ಬೀದಿ ಬದಿ ವ್ಯಾಪಾರಿಗಳಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮತ್ತು ಕುಟುಂಬದ ಸದಸ್ಯರಿಗೆ ಪಿಎಂ ಸುರಕ್ಷಾ ವಿಮಾ ಯೋಜನೆ, ಪಿಎಂ ಜೀವನ ಜ್ಯೋತಿ ವಿಮಾ ಯೋಜನೆ, ಪಿಎಂ ಜನ್ ಧನ್ ಯೋಜನೆ, ಪಿಎಂ ಶ್ರಮ ಯೋಗಿ ಮಾನ್ ಧನ್ ಯೋಜನೆ, ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆ, ಬಿಒಸಿಡಬ್ಲ್ಯು ಅಡಿಯಲ್ಲಿ ನೋಂದಣಿ, ಜನನಿ ಸುರಕ್ಷಾ ಯೋಜನೆ ಮತ್ತು ಪಿಎಂ ಮಾತೃ ವಂದನಾ ಯೋಜನೆಗಳ ಸೌಲಭ್ಯ ದೊರಕಿಸಲು ಸಂಬಂಧಿಸಿದ ಇಲಾಖೆಗಳ ಸಹಯೋಗದಲ್ಲಿ ಈ ಮೇಳ ನಡೆಯಲಿದೆ. ಮೇಳಕ್ಕೆ ಈಗಾಗಲೇ ಸಂಬಂಧಿಸಿದ ಯೋಜನೆಗಳಿಗೆ ಆಯ್ಕೆಯಾದ ಫಲಾನುಭವಿಗಳು ಮತ್ತು ಕುಟುಂಬದ ಸದಸ್ಯರು ಸೂಕ್ತ ದಾಖಲೆಗಳೊಂದಿಗೆ ಭಾಗವಹಿಸಿ ಈ ಕಾರ್ಯಕ್ರಮದ ಪ್ರಯೋಜನೆ ಪಡೆಯುವಂತೆ ನಗರಸಭೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here