ಉಪ್ಪಿನಂಗಡಿ: ಆ.13ರಂದು ಕೆಸರ್‌ಡೊಂಜಿ ದಿನ

0

ಉಪ್ಪಿನಂಗಡಿ: ಇಲ್ಲಿನ ಟೀಮ್ ದೋಸ್ತಿಲು ಪುಳಿತ್ತಡಿಯ ವತಿಯಿಂದ ಆ.13 ರಂದು ಪುಳಿತ್ತಡಿಯ ಪರಕಜೆ ಜಗದೀಶ್ ಪೂಜಾರಿಯವರ ಗದ್ದೆಯಲ್ಲಿ ಕೆಸರ್‌ಡೊಂಜಿ ದಿನ ಕಾರ್ಯಕ್ರಮ ನಡೆಯಲಿದೆ.

ಬೆಳಗ್ಗೆ 9ಕ್ಕೆ ಉದ್ಯಮಿ ನಟೇಶ್ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸುಧೀರ್ ಶೆಟ್ಟಿ ಬೆಂಗಳೂರು ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಸಂಜೀವ ಮಠಂದೂರು, ಹಿಂದೂಪರ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ, ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕೆ.ವಿ. ಪ್ರಸಾದ್, ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಾಲಯದ ಆಡಳಿತ ಮೊಕ್ತೇಸರ ಯೊಗೀಶ್ ಪೂಜಾರಿ ಕಡ್ತಿಲ, ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಯ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್, ದಕ್ಷಿಣ ಕನ್ನಡ ಜಿಲ್ಲಾ ಡಾಡ್ಜ್ ಬಾಲ್ ಅಸೋಸಿಯೇಶನ್‌ನ ಅಧ್ಯಕ್ಷ ವಿದ್ಯಾಧರ ಜೈನ್, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ-ಮಹಾಕಾಳಿ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಸುನೀಲ್ ಅನಾವು, ವಿಜಯ ಸಾಮ್ರಾಟ್ ಪುತ್ತೂರು ಇದರ ಸಂಸ್ಥಾಪಕ ಸಹಜ್ ರೈ ಬಳಜ್ಜ, ಕಡಮ್ಮಾಜೆ ಫಾರ್ಮ್ಸ್ನ ಜಯಪ್ರಕಾಶ್ ಡಿ.ಕೆ, ಉದ್ಯಮಿ ಪ್ರತಾಪ್ ಪೆರಿಯಡ್ಕ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here