ವಿಟ್ಲ‌ಮುಡ್ನೂರು ಗ್ರಾಮ ಪಂಚಾಯತ್ ನಲ್ಲಿ ಗ್ರಂಥಪಾಲಕರ ದಿನಾಚರಣೆ

0

ವಿಟ್ಲ: ವಿಟ್ಲ‌ಮುಡ್ನೂರು ಗ್ರಾಮ ಪಂಚಾಯತ್ ಆವರಣದಲ್ಲಿ ಆ.12ರಂದು ” ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ” ಅಂಗವಾಗಿ ಗ್ರಂಥಪಾಲಕರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಯಿತು.


ಗ್ರಾಮಪಂಚಾಯತ್ ಅಧ್ಯಕ್ಷ ಪುನೀತ್ ಮಾಡ್ತಾರ್ ರವರು ದೀಪಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಗ್ರಂಥ ಪಾಲಕರ ದಿನಾಚರಣೆಯ ಮಹತ್ವದ ಕುರಿತು ತಿಳಿಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರೋಹಿಣಿ, ಕುಂಡಡ್ಕ ಶಾಲಾ ಅಧ್ಯಾಪಕರಾದ ಜಯಪ್ರಕಾಶ್ ಉಪಸ್ಥಿತರಿದ್ದರು.

ಕಂಬಳಬೆಟ್ಟು ಶಾಲಾ ಶಿಕ್ಷಕಿ ಅಕ್ಷತಾ ರವರು ಪುಸ್ತಕದ ಮಹತ್ವದ ಕುರಿತು ಮಾಹಿತಿ ನೀಡಿದರು.
ಕುಂಡಡ್ಕ ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಹಾಡಿದರು. ಪಂಚಾಯತ್ ನ ಗ್ರಂಥಪಾಲಕಿ ಭವ್ಯರವರು ಸ್ವಾಗತಿಸಿದರು. ಜಯಪ್ರಕಾಶ್ ವಂದಿಸಿದರು. ನಾಟೆಕಲ್ಲು ಶಾಲಾ ಶಿಕ್ಷಕರಾದ ಶ್ರೀಪತಿ ನಾಯಕ್ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದ ಅಂಗವಾಗಿ ನಾಟೆಕಲ್ಲು ಕುಂಡಡ್ಕ ಹಾಗೂ ಕಂಬಳಬೆಟ್ಟು ಶಾಲಾ ವಿದ್ಯಾರ್ಥಿಗಳಿಗೆ ಭಾಷಣ, ಚಿತ್ರಕಲೆ ಹಾಗೂ ಸ್ವಾತಂತ್ರ್ಯ ಯೋಧರ ಹೆಸರು ಬರೆಯುವ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು ಗ್ರಾಮಪಂಚಾಯತ್ ಸಿಬ್ಬಂದಿ ಸಹಕರಿಸಿದರು.

LEAVE A REPLY

Please enter your comment!
Please enter your name here