ಕೊಯಿಲ: ಸಾಮೂಹಿಕ ವರಮಹಾಲಕ್ಷ್ಮೀ ಪೂಜಾ ಆಮಂತ್ರಣ ಪತ್ರಿಕೆ ಬಿಡುಗಡೆ

0

ಕಡಬ: ಕೊyiಲ ಗ್ರಾಮದ ಆತೂರು ಶ್ರೀ ಸದಾಶಿವ ದೇವಸ್ಥಾನದಲ್ಲಿ ಗ್ರಾಮದ ವಿವಿಧ ಸಂಘಗಳ ಸಹಯೋಗದಲ್ಲಿ ಆ.25ರಂದು ನಡೆಯಲಿರುವ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ದೇವಸ್ಥಾನದ ವಠಾರದಲ್ಲಿ ಆ.13ರಂದು ನಡೆಯಿತು.


ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಯದುಶ್ರೀ ಆನೆಗುಂಡಿ ಆಮಂತ್ರಣ ಪತ್ರ ಬಿಡುಗಡೆಗೊಳಿಸಿ ಮಾತನಾಡಿ, ಗ್ರಾಮದ ಪಾರ್ವತಿ ಮಾತೃಮಂಡಳಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಸ್ತ್ರೀ ಶಕ್ತಿ, ಸಂಜೀವಿನಿ ಒಕ್ಕೂಟ, ಎಲ್ಲಾ ಸಮುದಾಯದ ಸ್ವಸಹಾಯ ಗುಂಪು, ಯುವ ಸಂಘಟನೆಗಳು, ಭಜನಾ ಮಂದಿರದ ಸಹಯೋಗದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ನಡೆಯಲಿದೆ. ಬೆಳಿಗ್ಗೆ ದೀಪ ಪ್ರಜ್ವಲನೆಗೊಳಿಸಿ ಪೂಜೆ ಆರಂಭವಾಗಲಿದೆ. ಬಳಿಕ ನಿರ್ಮಾಣ ಹಂತದಲ್ಲಿರುವ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಯಿಲ ಕಲಾಯಿಗುತ್ತು ಮಾಲತಿ ಕೇಶವ ಅಮೈ ವಹಿಸಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಸುನಿತ್ ರಾಜ್ ಶೆಟ್ಟಿ ಉಪಸ್ಥಿತರಿರುವರು ಎಂದು ತಿಳಿಸಿದರು.
ದೇವಸ್ಥಾನದ ಅಭಿವೃದ್ದಿ ಸಮಿತಿ ಅಧ್ಯಕ್ಷ ಶೀನಪ್ಪ ಗೌಡ ವಳಕಡಮ, ಪ್ರಧಾನ ಕಾರ್ಯದರ್ಶಿ ಚೇತನ್ ಆನೆಗುಂಡಿ, ಉಪಾಧ್ಯಕ್ಷರಾದ ಭವಾನಿಶಂಕರ ಗೌಡ ಪರಂಗಾಜೆ, ಬಾಲಕೃಷ್ಣ ಗೌಡ ಬೆಂಗದಪಡ್ಪು, ಕಾರ್ಯದರ್ಶಿ ಶಶಿಕುಮಾರ್ ಅಂಬಾ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವನಜಾ ಪಲ್ಲಡ್ಕ, ಬಾಲಕೃಷ್ಣ ಏಣಿತ್ತಡ್ಕ, ಶ್ರೀರಾಮ ಕೆಮ್ಮಾರ, ವಿನಯ ರೈ ಪಟ್ಟೆ ಕೊಲ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here