ಹಿರೇಬಂಡಾಡಿ: ಸಾರ್ವಜನಿಕ ಗಣೇಶೋತ್ಸವ ಸಮಿತಿ

0

ಅಧ್ಯಕ್ಷ; ನಾರಾಯಣ ಕನ್ಯಾನ, ಕಾರ್ಯದರ್ಶಿ; ನವೀನ್ ಪಡ್ಪು, ಖಜಾಂಜಿ; ಬೆಳಿಯಪ್ಪ ಗೌಡ ಜಾಲು

ಹಿರೆಬಂಡಾಡಿ: ಇಲ್ಲಿನ ಉಳತ್ತೋಡಿ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ನಾರಾಯಣ ಕನ್ಯಾನ, ಕಾರ್ಯದರ್ಶಿಯಾಗಿ ನವೀನ್ ಪಡ್ಪು ಹಾಗೂ ಖಜಾಂಜಿಯಾಗಿ ಬೆಳಿಯಪ್ಪ ಗೌಡ ಜಾಲು ಆಯ್ಕೆಯಾಗಿದ್ದಾರೆ.
ಆ.13ರಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜನಾರ್ದನ ಗೌಡ ಶಾಂತಿತಡ್ಡರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗಣೇಶೋತ್ಸವ ಸಮಿತಿ ರಚಿಸಲಾಯಿತು. ವೇದಿಕೆಯಲ್ಲಿ ದೇವಸ್ಥಾನದ ಅರ್ಚಕರಾದ ಗೋಪಾಲಕೃಷ್ಣ ತೋಳ್ಪಾಡಿತ್ತಾಯರವರು ಉಪಸ್ಥಿತರಿದ್ದರು. ಸಭೆಯಲ್ಲಿ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು, ವ್ಯವಸ್ಥಾಪನಾ ಸಮಿತಿ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ವ್ಯವಸ್ಥಾಪನಾ ಸಮಿತಿ ಸದಸ್ಯ ಗಣೇಶ್ ಮಠಂದೂರು ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here