![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್(ರಿ) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ 77ನೇ ವರ್ಷದ ಸ್ವಾತಂತ್ರೋತ್ಸವ ದಿನಾರಚಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರಾಜ್ಯ ಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕರು, ಪ್ರಧಾನ ಸಂಪಾದಕರು, ಮಧು ಪ್ರಪಂಚ ಶ್ರೀ ನಾರಾಯಣ ರೈ ಕುಕ್ಕುವಳ್ಳಿ ಧ್ವಜಾರೋಹಣ ನೆರವೇರಿಸಿ, ಮಾತನಾಡಿದ ಶ್ರೀ ನಾರಾಯಣ ರೈ ಕುಕ್ಕವಳ್ಳಿ 77ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದ ನಾವೆಲ್ಲ ಶತಮಾನೋತ್ಸವವನ್ನು ಆಚರಿಸುವಂತಾಗಲಿ ಎಂದರು. ಅಕ್ಷಯ ಕಾಲೇಜಿನ ವಿದ್ಯಾರ್ಥಿಗಳ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ಸಾಧನೆಯನ್ನು ವಿವಿಧ ಮಾಧ್ಯಮಗಳಲ್ಲಿ ಗಮನಿಸಿದ್ದು, ಇನ್ನೂ ಅನೇಕ ಸಾಧನೆಗಳನ್ನು ವಿದ್ಯಾರ್ಥಿಗಳಿಂದ ಮೂಡಿ ಬರಲಿ ಎಂದು ಹಾರೈಸಿದರು.
![](https://puttur.suddinews.com/wp-content/uploads/2023/08/RAI_8243.jpg)
![](https://puttur.suddinews.com/wp-content/uploads/2023/08/RAI_8221.jpg)
ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲು ಅವರು ವಿದ್ಯಾರ್ಥಿಗಳಿಗೆ ಸ್ವಾಂತಂತ್ರ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಸಂಪತ್ ಪಕ್ಕಳ ಸ್ವಾಗತಿಸಿ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ ವಂದಿಸಿದರು. ಉಪನ್ಯಾಸಕ ಕಿಶನ್ ಎನ್ ರಾವ್ ನಿರೂಪಿಸಿದರು. ಬೋಧಕ ಹಾಗೂ ಬೋಧಕೇತರ ಸಿಬ್ಬಂಧಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.