![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ನಗರ ಮತ್ತು ಗ್ರಾಮಾಂತರ ಮಂಡಲಗಳ ವತಿಯಿಂದ 77 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಷ್ಟ್ರಪ್ರೇಮದ ದ್ಯೋತಕವಾಗಿ ‘ತಿರಂಗಾ ಯಾತ್ರೆ’ ಯು ಆ.18ರಂದು ಸಂಜೆ ಗಂಟೆ 4.30ಕ್ಕೆ ಪುತ್ತೂರಿನಲ್ಲಿ ನಡೆಯಲಿದೆ. ಪುತ್ತೂರು ಅಮರ್ ಜವಾನ್ ಜ್ಯೋತಿ ಸ್ಮಾರಕ ಬಳಿಯಿಂದ ಹೊರಟು ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ನಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಬಿಜೆಪಿ ಕಚೇರಿ ಪ್ರಕಟಣೆ ತಿಳಿಸಿದೆ.