ಪರ್ಪುಂಜ ರಾಮಜಾಲು ಗರಡಿಯಲ್ಲಿ ನಾಗರ ಪಂಚಮಿ ಆಚರಣೆ

0

ಪುತ್ತೂರು: ಹತ್ತು ಹಲವು ಕಾರಣಿಕತೆಗಳನ್ನು ಒಳಗೊಂಡ ತುಳುನಾಡಿನ ವೀರಪುರುಷರಾದ ಕೋಟಿ ಚೆನ್ನಯರ ಆರಾಧನಾ ಕ್ಷೇತ್ರವಾಗಿರುವ ಒಳಮೊಗ್ರು ಗ್ರಾಮದ ಪರ್ಪುಂಜ ರಾಮಜಾಲು ಶ್ರೀ ಬ್ರಹ್ಮಬೈದೆರ್ಕಳ ಗರಡಿಯಲ್ಲಿ ಆ.21 ರಂದು ನಾಗರಪಂಚಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಅರ್ಚಕ ಪ್ರಕಾಶ್ ನಕ್ಷತ್ರಿತ್ತಾಯ ಮತ್ತು ತಂಡದವರಿಂದ ಬೆಳಿಗ್ಗೆ ನಾಗ ದೇವರಿಗೆ ಹಾಲಿನ ಅಭಿಷೇಕ ಬಳಿಕ ಸೀಯಾಳಾಭಿಷೇಕ ನಡೆದು, ತಂಬಿಲ ಸೇವೆ ನಡೆದು ಭಕ್ತಾಧಿಗಳಿಗೆ ಪ್ರಸಾದ ವಿತರಣೆ ನಡೆಯಿತು. ಗ್ರಾಮದ ಹಾಗೂ ಊರಪರವೂರ ನೂರಾರು ಭಕ್ತಾಧಿಗಳು ಆಗಮಿಸಿ ಶ್ರೀ ದೇವರ ಗಂಧಪ್ರಸಾದ ಸ್ವೀಕರಿಸಿದರು. ಗರಡಿಯ ಆಡಳಿತ ಮೊಕ್ತೇಸರ ಕೆ.ಸಂಜೀವ ಪೂಜಾರಿ ಕೂರೇಲುರವರು ಭಕ್ತಾಧಿಗಳನ್ನು ಸ್ವಾಗತಿಸಿ, ಪ್ರಸಾದ ನೀಡಿ ಸತ್ಕರಿಸಿದರು.

LEAVE A REPLY

Please enter your comment!
Please enter your name here