ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಡಿಸಿಸಿ ಬ್ಯಾಂಕ್ ಪ್ರಶಸ್ತಿ ಪ್ರದಾನ

0

ಪುತ್ತೂರು: ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಗಣನೀಯ ಸಾಧನೆಯನ್ನು ಗುರುತಿಸಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಆ.19ರಂದು ಬ್ಯಾಂಕ್ ಉತ್ಕೃಷ್ಟ ಸಹಕಾರಿ ಭವನದಲ್ಲಿ ನಡೆದ ಸಂಘದ ಮಹಾಸಭೆಯಲ್ಲಿ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು. ಸಂಘದ ಅಧ್ಯಕ್ಷ ಸತೀಶ್ ಗೌಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಸೀತಾರಾಮ ಗೌಡ ಪ್ರಶಸ್ತಿ ಸ್ವೀಕರಿಸಿದರು. ಸಂಘದ ನಿರ್ದೇಶಕರಾದ ಚಂದಪ್ಪ ಪೂಜಾರಿ ಕಾಡ್ಲ, ಅಂಬ್ರೋಸ್ ಡಿ’ಸೋಜ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ ಜಯರಾಮ ರೈ, ಸಹಕಾರ ಸಂಘಗಳ ಉಪನಿಬಂಧಕ ರಮೇಶ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here