ಇಸ್ರೋ ವಿಜ್ಞಾನಿಗಳ ಸಾಧನೆ ದೇಶಕ್ಕೆ ಹೆಮ್ಮೆಯ ವಿಚಾರ- ಶಾಸಕ ಅಶೋಕ್‌ ಕುಮಾರ್‌ ರೈ

0

ಪುತ್ತೂರು: ಚಂದ್ರಯಾನ ವಿಕ್ರಂ ಲ್ಯಾಂಡರ್-3 ಯಶಸ್ವಿಯಾಗಿದೆ. ಇದು ಇಸ್ರೋ ವಿಜ್ಞಾನಿಗಳ ಸಾಧನೆ ದೇಶಕ್ಕೆ ಹೆಮ್ಮೆಯ ವಿಚಾರವಾಗಿದೆ. ವಿನೂತನ ಸಂಶೋಧನೆಗಳ‌ ಮೂಲಕ ಭಾರತವನ್ನು ವಿಶ್ವವೇ ಗುರುತಿಸುವಂತೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ವೈಜ್ಞಾನಿಕ ಲೋಕದಲ್ಲಿ ಹೊಸ ಹೊಸ ಆವಿಷ್ಕಾರವನ್ನು‌ ಮಾಡುವ‌ ಮೂಲಕ ಭಾರತ ದೇಶದ ಘನತೆ ಗೌರವವನ್ನು ಉತ್ತುಂಗಕ್ಕೇರಿಸುವ ಕೆಲಸ ನಡೆಯಲಿ. ಇಸ್ರೋ ವಿಜ್ಞಾನಿಗಳಿಗೆ ಆತ್ಮೀಯ ಅಭಿನಂದನೆಗಳು ಎಂದು ಪುತ್ತೂರಿನ ಶಾಸಕ ಅಶೋಕ್‌ ಕುಮಾರ್‌ ರೈ ಪತ್ರಿಕಾ ಹೇಳಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here