ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ

0

ಪುತ್ತೂರು: ಸಂಸ್ಕಾರ ಭಾರತೀ ದ. ಕ. ಜಿಲ್ಲೆ ಪುತ್ತೂರು ವಿಭಾಗ ಇದರ ಆಶ್ರಯದಲ್ಲಿ ರೇಡಿಯೋ ಪಾಂಚಜನ್ಯ, ರೋಟರಿ ಯುವ, ರೋಟರಿ ಕ್ಲಬ್ ಪುತ್ತೂರು ಸಿಟಿ, ಇನ್ನರ್ ವೀಲ್ ಕ್ಲಬ್ ಇವುಗಳ ಸಹಯೋಗದೊಂದಿಗೆ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ತಾಲೂಕು ಮಟ್ಟದ ದೇಶಭಕ್ತಿಗೀತೆ ಸ್ಪರ್ದೆಯನ್ನು ಇದೇ ಆಗಸ್ಟ್ 10ರಂದು ಏರ್ಪಡಿಸಲಾಯಿತು.

ಇದರಲ್ಲಿ ಪುತ್ತೂರು ತಾಲೂಕಿನ ವಿವಿಧ ಶಾಲೆಯ ವಿದ್ಯಾರ್ಥಿ,ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ನೆಹರು ನಗರದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಾದ ಮಾನ್ವಿ ಕಜೆ, ಶ್ರೀರಾಮ, ಅಕ್ಷಿತ್ ಎಮ್, ಸೃಷ್ಟಿ ಎಮ್. ಸಾಲಿಯಾನ್, ಸೃಷ್ಟಿ ಎ, ಸುದೀಕ್ಷ ಎಸ್ ಭಟ್, ಶ್ರಾವ್ಯ ನಾಯಕ್ ಇವರ ತಂಡ ಭಾಗವಹಿಸಿ ಪ್ರಥಮ ಬಹುಮಾನ ಪಡೆದಿರುವರು. ಇವರಿಗೆ ಶಾಲಾ ಶಿಕ್ಷಕಿ ಜಯಶ್ರೀ ಕೆ. ಎನ್ ಅವರು ಮಾರ್ಗದರ್ಶನ ನೀಡಿರುತ್ತಾರೆ.

LEAVE A REPLY

Please enter your comment!
Please enter your name here