ಆ.27: ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠ, ಬಿಲ್ಲವ ಈಡಿಗ ರಾಷ್ಟ್ರೀಯ ಮಹಾಮಂಡಳಿಯ ತಾಲೂಕು ಸಮಿತಿಯ ವಿಶೇಷ ಸಭೆ

0

ಪುತ್ತೂರು: ಬಿಲ್ಲವ ಯುವ ಸಮುದಾಯದ ಮನ ಪರಿವರ್ತನೆಗೆ ಕರಾವಳಿ ಭಾಗದ ಪ್ರತಿ ಗ್ರಾಮದಲ್ಲೂ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠ, ಬಿಲ್ಲವ ಈಡಿಗ ರಾಷ್ಟ್ರೀಯ ಮಹಾಮಂಡಳಿಯ ವಿವಿಧ ಪದಾಧಿಕಾರಿಗಳನ್ನು ಕಲಬುರಗಿ ಮಠದ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠಾಧಿಪತಿ ಶ್ರೀ ಪ್ರಣವಾನಂದ ಸ್ವಾಮೀಜಿ ಇವರು ನೇಮಗೊಳಿಸಿರುತ್ತಾರೆ.

ಈ ಹಿನ್ನೆಲೆಯಲ್ಲಿ ಪುತ್ತೂರು ತಾಲೂಕಿನಲ್ಲಿ ಬಿಲ್ಲವ ಸಮುದಾಯವನ್ನು ಮತ್ತಷ್ಟು ಬಲವರ್ಧನೆಗೊಳಿಸಲು ಪುತ್ತೂರು ತಾಲೂಕಿನ ವಿಶೇಷ ಸಭೆಯನ್ನು ಆ.27 ರಂದು ಅಪರಾಹ್ನ ಪುತ್ತೂರು ಬಿಲ್ಲವ ಸಂಘದಲ್ಲಿ ಕರೆಯಲಾಗಿದ್ದು, ಬಿಲ್ಲವ ಸಮಾಜ ಬಾಂಧವರು ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಬೇಕಾಗಿ ರಾಷ್ಟ್ರೀಯ ಬಿಲ್ಲವ ಈಡಿಗ ಮಹಾಮಂಡಳಿ ಇದರ ಪುತ್ತೂರು ತಾಲೂಕಿನ ಅಧ್ಯಕ್ಷ ಕೇಶವ ಪೂಜಾರಿ ಬೆದ್ರಾಳರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here