ಲಕ್ಷ್ಮೀದೇವಿ ಬೆಟ್ಟದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

0

ಪುತ್ತೂರು:ಪುರಾತನ ಕಾರಣಿಕ ಕ್ಷೇತ್ರಗಳಲ್ಲೊಂದಾದ ರೈಲು ನಿಲ್ದಾಣದ ಬಳಿಯ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಆ.25ರಂದು ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಿತು.

ಬೆಳಿಗ್ಗೆ ಶಿಖರ ಪ್ರತಿಷ್ಠೆ, ಸಂಕಲ್ಪ, ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಭಕ್ತಾದಿಗಳಿಗೆ ಅರಸಿನ, ಕುಂಕುಮ, ಬಲೆ,‌ ರವಿಕೆ ಕನ, ನೂಲು(ವಯನ ದಾನ)ಇತ್ಯಾದಿಗಳನ್ನು ಪ್ರಸಾದ ರೂಪದಲ್ಲಿ ಧರ್ಮದರ್ಶಿ ಐತ್ತಪ್ಪ ಸಪಲ್ಯರವರು ಭಕ್ತಾದಿಗಳಿಗೆ ವಿತರಿಸರಿಸಿದರು. ಶ್ರೀ ಕೃಷ್ಣ ಉಪಾಧ್ಯಾಯ ಪ್ರವಚನ ನೀಡಿದರು. ನೂರಾರು ಮಂದಿ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


LEAVE A REPLY

Please enter your comment!
Please enter your name here