ಆ.27: ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘದಿಂದ ಕೆಸರುಗದ್ದೆ ಕ್ರೀಡಾಕೂಟ

0

ಪುತ್ತೂರು: ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು ಇದರ ವತಿಯಿಂದ ಆ.27 ರಂದು ನರಿಮೊಗರು ಗ್ರಾಮದ ಮುಗೇರಡ್ಕದಲ್ಲಿ ಕೆಸರುಗದ್ದೆ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಮೋನಪ್ಪ ಪುರುಷ ಮುಗೇರಡ್ಕ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.


ಮುಗೇರಡ್ಕದ ಲೀಲಾವತಿ ವಿಶ್ವನಾಥ ಜೋಗಿ ಅವರ ಗದ್ದೆಯಲ್ಲಿ ಈ ಕೆಸರುಗದ್ದೆ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು, ಸಂಘದ ವ್ಯಾಪ್ತಿಯ ಪುತ್ತೂರು, ಕಡಬ, ಬೆಳ್ತಂಗಡಿ, ಸುಳ್ಯದ ಸೇರಿದಂತೆ ಕರ್ನಾಟಕದಾದ್ಯಂತ ಕಾಸರಗೋಡು, ಮಂಗಳೂರು, ವಿಟ್ಲ, ಬಂಟ್ವಾಳ, ಮುಡಿಪು ಮತ್ತು ಉಡುಪಿ ಜಿಲ್ಲೆಯ ಉಡುಪಿ, ಕುಂದಾಪುರದಿಂದ ಸಮಾಜ ಬಾಂಧವರು ಈ ಕ್ರೀಡಾಕೂಟದಲ್ಲಿ ಭಾವಹಿಸಲಿದ್ದಾರೆ. ಪುರುಷರಿಗೆ, ಮಹಿಳೆಯರಿಗೆ ಮಕ್ಕಳಿಗೆ ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ಕ್ರೀಡಾಕೂಟವನ್ನು ಬೆಳಗ್ಗೆ ಸಮುದಾಯದ ಹಿರಿಯರೊಬ್ಬರು ಉದ್ಘಾಟನೆ ಮಾಡಿ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಂಘದ ಸಂಚಾಲಕ ದಯಾನಂದ ಮುಗೇರಡ್ಕ, ಉಪಾಧ್ಯಕ್ಷ ನವೀನ್ ಪುರುಷರಕಟ್ಟೆ, ಸದಸ್ಯರಾದ ಉಮೇಶ್ ಪುರುಷರಕಟ್ಟೆ, ಹರೀಶ್ಚಂದ್ರ ಪುರುಷರಕಟ್ಟೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here