ಸದ್ಯ ಯಾರ ಬಿಪಿಎಲ್ ಕಾರ್ಡ್ ಕೂಡಾ ರದ್ದಾಗುವುದಿಲ್ಲ-ಸಚಿವ ಕೆ.ಹೆಚ್.ಮುನಿಯಪ್ಪ

0

ಬೆಂಗಳೂರು:ರಾಜ್ಯದಲ್ಲಿ ಪ್ರಸ್ತುತ ಯಾವುದೇ ಬಿಪಿಎಲ್ ಪಡಿತರ ಚೀಟಿ ರದ್ದಾಗುವುದಿಲ್ಲ,ಇದರ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ.ಈ ಹಿಂದೆ ರಾಜ್ಯದಲ್ಲಿ ನಾಲ್ಕು ಚಕ್ರದ ವಾಹನ ಇರುವವರ ಬಿಪಿಎಲ್ ಕಾರ್ಡ್ ರದ್ದಾಗಲಿದೆ ಎಂಬ ಸುದ್ದಿ ಹರಡಿತ್ತು.ಆದರೆ,ಸದ್ಯ ಅಂತಹ ಯಾವುದೇ ನಿರ್ಧಾರ ಇಲ್ಲ ಎಂದು ಸಚಿವರು ಹಾಸನದಲ್ಲಿ ಸ್ಪಷ್ಟಪಡಿಸಿದರು.


ಮೂರು ಲಕ್ಷ ಅರ್ಜಿಗಳು ಬಂದಿವೆ ಇವೆಲ್ಲವನ್ನು ಪರಿಶೀಲಿಸಿ ಮೂರು ತಿಂಗಳಲ್ಲಿ ಅರ್ಹರಿಗೆ ಬಿಪಿಎಲ್, ಎಪಿಎಲ್ ಕಾರ್ಡ್ ನೀಡಲಾಗುವುದು.ಸ್ಥಗಿತಗೊಂಡಿರುವ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ಆನ್‌ಲೈನ್ ಪೋರ್ಟಲ್ ಪ್ರಾರಂಭಿಸಲು ಸದ್ಯಕ್ಕೆ ಅನುಮತಿ ಇಲ್ಲ ಎಂದು ಸಚಿವರು ಹೇಳಿದರು.ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನೀತಿಸಂಹಿತೆ ಜಾರಿಯಾಗುತ್ತಿದ್ದಂತೆ ಈ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸುವ ಆನ್‌ಲೈನ್ ಪೋರ್ಟಲ್ ಸ್ಥಗಿತಗೊಳಿಸಲಾಗಿತ್ತು.ಪ್ರಸ್ತುತ ಕಾಂಗ್ರೆಸ್ ಸರ್ಕಾರ ರಚನೆಯಾಗಿ ಮೂರು ತಿಂಗಳು ಕಳೆದರೂ ಇನ್ನೂ ಪೋರ್ಟಲ್ ಆರಂಭಿಸಿಲ್ಲ.

LEAVE A REPLY

Please enter your comment!
Please enter your name here