ಸವಣೂರು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಬಿಡುಗಡೆ, ಸಮಾಲೋಚನಾ ಸಭೆ

0

ಸವಣೂರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ವತಿಯಿಂದ ಸವಣೂರಿನ ವಿನಾಯಕ ಸಭಾಭವನದಲ್ಲಿ ಸೆ.19 ರಿಂದ ಸೆ.21 ರ ತನಕ ನಡೆಯಲಿರುವ 41ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಬಿಡುಗಡೆ ಹಾಗೂ ಸಮಾಲೋಚನಾ ಸಭೆ ಆ.29ರಂದು ವಿನಾಯಕ ಸಭಾಭವನದಲ್ಲಿ ನಡೆಯಿತು.

ಸಭೆಯಲ್ಲಿ ಮೂರುದಿನಗಳ ಕಾಲ ನಡೆಯುವ ಉತ್ಸವದಲ್ಲಿ ಸಾಂಸ್ಕೃತಿಕ, ಧಾರ್ಮಿಕ, ಭಜನೆ ಹಾಗೂ ಅನ್ನದಾನ ನಡೆಯಲಿದ್ದು, ಕಾರ್ಯಕ್ರಮ ಯಶಸ್ವಿ ನಿಟ್ಟಿನಲ್ಲಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಕೆ.ಸೀತಾರಾಮ ರೈ ಸವಣೂರು, ಅಧ್ಯಕ್ಷ ಶಿವರಾಮ ಗೌಡ ಮೆದು, ಕಾರ್ಯದರ್ಶಿ ಸುಧಾಕರ ರೈ ದೇವಸ್ಯ, ಉಪಾಧ್ಯಕ್ಷ ರಾಘವ ಗೌಡ ಸವಣೂರು, ಜತೆ ಕಾರ್ಯದರ್ಶಿ ಪ್ರಭಾಕರ ಶೆಟ್ಟಿ ನಡುಬೈಲು, ಕೋಶಾಧಿಕಾರಿ ರಾಮಕೃಷ್ಣ ಪ್ರಭು, ಸದಸ್ಯರಾದ ಎನ್.ಸುಂದರ ರೈ ಸವಣೂರು, ಚಂದಪ್ಪ ಪೂಜಾರಿ ಊರುಸಾಗು, ಸವಣೂರು ಸಿ.ಎ.ಬ್ಯಾಂಕ್‌ನ ಸಿಇಓ ಚಂದ್ರಶೇಖರ ಪಿ., ಸಂಜೀವ ಪೂಜಾರಿ ಅಗರಿ, ಬಾಲಚಂದ್ರ ರೈ ಕೆರೆಕ್ಕೋಡಿ, ಗಂಗಾಧರ ಸುಣ್ಣಾಜೆ, ವೆಂಕಪ್ಪ ಗೌಡ ಅಡೀಲು, ಗಂಗಾಧರ ಪೆರಿಯಡ್ಕ, ಸತೀಶ್ ಬಲ್ಯಾಯ, ಚೇತನ್ ಕೋಡಿಬೈಲು, ಜಯರಾಮ ರೈ, ಸವಣೂರು ಶ್ರೀ ಶಾರದಾಂಬಾ ಸೇವಾ ಸಂಘದ ಸ್ಥಾಪಕಾಧ್ಯಕ್ಷ ಮೋಹನ್ ರೈ ಕೆರೆಕ್ಕೋಡಿ, ಅಧ್ಯಕ್ಷ ಸಂಪತ್ ಕುಮಾರ್ ಇಂದ್ರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here