ಗುಂಡ್ಯ: ಕಾರು,ಲಾರಿ ಡಿಕ್ಕಿ-ಕಾರು ಚಾಲಕನಿಗೆ ಗಾಯ

0

ನೆಲ್ಯಾಡಿ: ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಕಾರು ಚಾಲಕ ಗಾಯಗೊಂಡಿರುವ ಘಟನೆ ಸೆ.2ರಂದು ಮಧ್ಯಾಹ್ನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಗುಂಡ್ಯದಲ್ಲಿ ನಡೆದಿದೆ.
ಬೆಂಗಳೂರು ನಿವಾಸಿ, ಕಾರು ಚಾಲಕ ಸೂರ್ಯನಾಯಕ ಬಿ.(28ವ.)ಗಾಯಗೊಂಡವರಾಗಿದ್ದಾರೆ. ಇವರು ಕಾರಿನಲ್ಲಿ (ಕೆಎ 05,ಎಂಝೆಡ್ 8404) ಸ್ನೇಹಿತರಾದ ರೋಹಿತ್, ಪವನ್ ಮತ್ತು ತಿರಮಲೇಶ್ವರ ಎಂಬವರ ಜೊತೆಗೆ ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದಾಗ ಶಿರಾಡಿ ಗ್ರಾಮದ ಗುಂಡ್ಯದಲ್ಲಿ ಲಾರಿ (ಕೆಎಲ್ 13 ಎಡಬ್ಲ್ಯು4022)ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರು ಜಖಂಗೊಂಡಿದ್ದು ಕಾರು ಚಲಾಯಿಸುತ್ತಿದ್ದ ಸೂರ್ಯನಾಯಕ ಅವರು ಗಾಯಗೊಂಡು ನೆಲ್ಯಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಕಾರಿನಲ್ಲಿದ್ದ ಇತರರು ಅಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

LEAVE A REPLY

Please enter your comment!
Please enter your name here