ಕರಾಟೆ: ವಿಸ್ಮಯ್ ಯನ್.ನಾಯಕ್ ರಾಜ್ಯ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ದಕ್ಷಿಣ ಕನ್ನಡ ಅಮೆಚೂರ್ ಕ್ರೀಡಾ ಕರಾಟೆ ಸಂಘದ ವತಿಯಿಂದ ಮಂಗಳೂರಿನ ಟೌನ್‌ಹಾಲ್‌ನಲ್ಲಿ ನಡೆದ ಜಿಲ್ಲಾ ಮಟ್ಟದ ದಕ್ಷಿಣ ಕನ್ನಡ ಜಿಲ್ಲಾ ಕರಾಟೆ ಸೆಲೆಕ್ಷನ್ ಚಾಂಪಿಯನ್‌ಶಿಪ್ 2023ರಲ್ಲಿ ಸರಸ್ವತಿ ವಿದ್ಯಾ ಮಂದಿರದ 10ನೇ ತರಗತಿಯ ವಿದ್ಯಾರ್ಥಿಯಾದ ವಿಸ್ಮಯ್ ಯನ್.ನಾಯಕ್ ರವರು ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗು ಕಟಾ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರು ಪುತ್ತೂರು ತಾಲೂಕು ನರಿಮೊಗ್ರು ಗ್ರಾಮದ ಮುಕ್ವೆ ಚಂದ್ರಮ್ ಸಾಗ್ ನವೀನ್ ನಾಯಕ್ ಹಾಗೂ ವಿಜೇತ ನವೀನ್ ನಾಯಕ್ ದಂಪತಿ ಪುತ್ರ.

LEAVE A REPLY

Please enter your comment!
Please enter your name here