ರಾಮಕೃಷ್ಣ ಮಠದಲ್ಲಿ 5ನೇ ಭಜನ್ ಸಂಧ್ಯಾ ಕಾರ್ಯಕ್ರಮ ಸಂಪನ್ನ

0

ಶ್ರೀ ಸತ್ಯನಾರಾಯಣ ಭಜನಾ ಮಂದಿರ ಬೋಳಾರ ಇವರಿಂದ 4ನೇ ವಾರದ ಭಜನಾ ಸೇವೆ
ಮಂಗಳೂರು ರಾಮಕೃಷ್ಣ ಮಠದಲ್ಲಿ 5ನೇ ಭಜನ್ ಸಂಧ್ಯಾ ಕಾರ್ಯಕ್ರಮ ಸಂಪನ್ನಗೊಂಡಿತು. ಭಜನ್ ಸಂಧ್ಯಾದ ಐದನೇ ಕಾರ್ಯಕ್ರಮದಲ್ಲಿ ಶ್ರೀ ಸತ್ಯನಾರಾಯಣ ಭಜನಾ ಮಂದಿರ ಬೋಳಾರ, ಮಂಗಳೂರು ಇವರು ಭಜನಾ ಸೇವೆಯನ್ನು ನೀಡಿದರು. ಭಜನಾತಂಡದ ಸೇವೆಯ ನಂತರ ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜಿ ಅವರು ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಆಶ್ರಮದ ವತಿಯಿಂದ ಭಜನಾತಂಡಕ್ಕೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ತದನಂತರ ಆರತಿ ಹಾಗೂ ಆಶ್ರಮದ ವಿದ್ಯಾರ್ಥಿಗಳಿಂದ ಭಜನೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಆಶ್ರಮದ ಭಕ್ತರು, ಸ್ವಯಂಸೇವಕರು ಹಾಗೂ ಹಲವಾರು ಸಾರ್ವಜನಿಕರು ಭಾಗವಹಿಸಿದರು.

ಮುಂದಿನ ಭಜನ್ ಸಂಧ್ಯಾ ಕಾರ್ಯಕ್ರಮ ಸೆ.10 ಭಾನುವಾರದಂದು ಸಂಜೆ 4 ಗಂಟೆಗೆ ಸರಿಯಾಗಿ ಶ್ರೀ ಆದಿಮಹೇಶ್ವರಿ ದೇವಸ್ಥಾನ ವೈದ್ಯನಾಥ ಭಜನಾ ಮಂಡಳಿ ಜಪ್ಪು ಮಹಾಕಾಳಿಪಡ್ಪು, ಮಂಗಳೂರು ಇವರಿಂದ ಭಜನಾ ಸೇವೆ ನಡೆಯಲಿದೆ.

LEAVE A REPLY

Please enter your comment!
Please enter your name here