ಕೌಡಿಚ್ಚಾರು: ಶ್ರೀ ಕೃಷ್ಣ ಭಜನಾ ಮಂದಿರ ಜನ್ಮಾಷ್ಟಮಿ ಆಚರಣೆ

0

ಅರಿಯಡ್ಕ: ಶ್ರೀ ಕೃಷ್ಣ ಭಜನಾ ಮಂದಿರ ಕೌಡಿಚ್ಚಾರು ಇಲ್ಲಿ ಸೆ.6ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುದ್ದು ಕೃಷ್ಣ ಸ್ಪರ್ಧೆ ಹಾಗೂ ಸ್ಥಳೀಯರಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.
ಕಾರ್ಯಕ್ರಮವನ್ನು ಅರಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಮಣಿಯಾಣಿ ಕುತ್ಯಾಡಿಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಭಜನಾ ಮಂದಿರದ ಅಧ್ಯಕ್ಷ ರಾಮದಾಸ್ ರೈ ಮದ್ಲ, ಹಾಗೂ ಪದಾಧಿಕಾರಿಗಳು, ಭಜನಾ ಮಂದಿರದ ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರು , ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೌಡಿಚ್ಚಾರು, ಸಾರ್ವಜನಿಕ ಶ್ರೀ ನಾಗನ ಕಟ್ಟೆ ಸಮಿತಿ ಕೌಡಿಚ್ಚಾರು, ಸಾರ್ವಜನಿಕ ಆಯುಧ ಪೂಜಾ ಸಮಿತಿ ಸದಸ್ಯರು,ವಾಹನ ಚಾಲಕ ಮಾಲಕರ ಸಂಘದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. 50ಕ್ಕೂ ಮಿಕ್ಕಿ ಮಕ್ಕಳು ಮುದ್ದು ಕೃಷ್ಣ ಸ್ಪರ್ಧೆಲ್ಲಿ ಭಾಗವಹಿಸಿದರು.
ಗೌರವಾರ್ಪಣೆ: ಕಾರ್ಯಕ್ರಮದ ಬಹುಮಾನ ಪ್ರಯೋಜಕರಾಗಿ ಸಹಕರಿಸಿದ ಮಿಥುನ್ ಗೌಡ ಪಾದೆಲಾಡಿಯ ವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.
ರಾತ್ರಿ ಗಂಟೆ 7ರಿಂದ ಚಂದ್ರೋದಯದ ತನಕ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ವಿಶೇಷ ಭಜನಾ ಸಂಕೀರ್ತನಾ ಕಾರ್ಯಕ್ರಮ ನಡೆಯಿತು. 500ಕ್ಕೂ ಮಿಕ್ಕಿ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಕೀರ್ತಿ ಮಾಯಿಲ ಕೊಚ್ಚಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here