ಬಡಗನ್ನೂರು ದರೋಡೆ ನಡೆದ ಮನೆಗೆ ಅರುಣ್ ಕುಮಾರ್ ಪುತ್ತಿಲ ಭೇಟಿ

0

ಪೊಲೀಸರು ಬೀಟ್ ವ್ಯವಸ್ಥೆ ಸರಿಪಡಿಸುವಂತೆ ಪುತ್ತಿಲ ಪರಿವಾರ ಆಗ್ರಹ
ಪುತ್ತೂರು: ಬಡಗನ್ನೂರು ಕುದ್ಕಾಡಿ ಗುರುಪ್ರಸಾದ್ ರೈ ಅವರ ಮನೆಯಲ್ಲಿ ಮುಸುಕುದಾರಿಗಳ ತಂಡದಿಂದ ನಗದು, ಚಿನ್ನಾಭರಣ ದರೋಡೆ ನಡೆದ ಘಟನೆಗೆ ಸಂಬಂಧಿಸಿ ಪುತ್ತಿಲ ಪರಿವಾರದ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಅವರು ಸೆ.8ರಂದು ಅವರ ಮನೆಗೆ ಭೇಟಿ ನೀಡಿ ಗುರುಪ್ರಸಾದ್ ರೈ ಮತ್ತು ಅವರ ತಾಯಿ ಜೊತೆ ಮಾತನಾಡಿದರು.
ಈ ದರೋಡೆ ಪ್ರಕರಣ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಪುತ್ತೂರಿನ ಗ್ರಾಮಾಂತರ ಭಾಗದಲ್ಲಿ ಹಲವು ಕಡೆ ರಾತ್ರಿ ದರೋಡೆ ನಡೆಯುತ್ತಿದ್ದು, ಪೊಲೀಸರು ಗ್ರಾಮಾಂತರ ಭಾಗದಲ್ಲಿ ರಾತ್ರಿ ಬೀಟ್ ವ್ಯವಸ್ಥೆ ಮಾಡಿ ಜನಸಾಮಾನ್ಯರಿಗೆ ಸೂಕ್ತ ರಕ್ಷಣೆ ನೀಡಬೇಕು. ಈ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಎಂಬುದು ಪುತ್ತಿಲ ಪರಿವಾರ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here