ಬೆಟ್ಟಂಪಾಡಿ: ಸಾರ್ವಜನಿಕ ಗಣೇಶೋತ್ಸವದ ಕ್ರೀಡಾ-ಸಾಂಸ್ಕೃತಿಕ ಸ್ಪರ್ಧೆ

0


ಬೆಟ್ಟಂಪಾಡಿ: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ 38 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಸೆ. 10 ರಂದು ದೇವಾಲಯದ ವಠಾರದಲ್ಲಿ ನಡೆಯಿತು.


ಬೆಟ್ಟಂಪಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಸುಂದರ ನಾಯಕ್‌ ಬಾಳೆಗುಳಿ ಸ್ಪರ್ಧಾ ಕಾರ್ಯಕ್ರಮಗಳಿಗೆ ವಿಧ್ಯುಕ್ತ ಚಾಲನೆ ನೀಡಿ ಶುಭ ಹಾರೈಸಿದರು. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಮನಮೋಹನ ರೈ ಚೆಲ್ಯಡ್ಕ, ನಿಕಟಪೂರ್ವ ಅಧ್ಯಕ್ಷ ಸೀತಾರಾಮ ಗೌಡ ಮಿತ್ತಡ್ಕ, ಹಾಲಿ ಅಧ್ಯಕ್ಷ ಪ್ರಭಾಕರ ರೈ ಬಾಜುವಳ್ಳಿ, ಪ್ರಧಾನ ಕಾರ್ಯದರ್ಶಿ ಧನಂಜಯ ರೆಂಜ, ಕೋಶಾಧ್ಯಕ್ಷ ರಂಜಿತ್‌ ತಲೆಪ್ಪಾಡಿ ಉಪಸ್ಥಿತರಿದ್ದರು. ಸಂಜೆ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು. ನಿಕಟಪೂರ್ವ ಅಧ್ಯಕ್ಷರುಗಳಾದ ಡಾ. ಸುಬ್ರಹ್ಮಣ್ಯ ವಾಗ್ಲೆ, ನಾಗೇಶ್‌ ರೈ ಮೂರ್ಕಾಜೆ, ಸೀತಾರಾಮ ಗೌಡ ಮತ್ತು ಹಾಲಿ ಪದಾಧಿಕಾರಿಗಳು ಬಹುಮಾನ ವಿತರಿಸಿದರು. ಸಮಿತಿಯ ಸದಸ್ಯ ಶಿವಪ್ರಸಾದ್‌ ತಲೆಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here