ಅನಂತಾಡಿ ಗ್ರಾಮ ಪಂಚಾಯತ್‌ಗೆ ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ ಪ್ರಶಸ್ತಿ

0

ವಿಟ್ಲ: ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ – 2023 ಸಮೀಕ್ಷೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕರ್ನಾಟಕ ಮತ್ತು ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ವಿವಿಧ ಘಟಕಾಂಶಗಳನ್ನು ಉತ್ತಮವಾಗಿ ಅನುಷ್ಠಾನ ಮಾಡಿರುವ ಅನಂತಾಡಿ ಗ್ರಾಮ ಪಂಚಾಯತ್‌ಗೆ ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ ಪ್ರಶಸ್ತಿ ಲಭಿಸಿದೆ.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕರಾದ ನಾಗೇಂದ್ರ ಪ್ರಸಾದ್ ರವರು ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಜಾತ ಎ.ರವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಉಪಕಾರ್ಯದರ್ಶಿ, ಜಿಲ್ಲಾ ಎಸ್.ಬಿ.ಎಂ. ನೋಡೆಲ್ ಅಧಿಕಾರಿ ರಘು ಎಇ., ಅನಂತಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಶ್ವನಾಥ ಬೈಲಾಮೂಲೆ, ಮಾಜಿ ಅಧ್ಯಕ್ಷರಾದ ಗಣೇಶ್ ಪೂಜಾರಿ ಬಂಟ್ರಿಂಜ, ಸದಸ್ಯರಾದ ಪುರಂದರ ಗೌಡ ಟಿ. ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here