ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಆನಡ್ಕ ಸ.ಹಿ. ಪ್ರಾ ಶಾಲೆಯ ಮುಖ್ಯ ಗುರು ಶುಭಲತಾರಿಗೆ ಸನ್ಮಾನ

0

ಪುತ್ತೂರು:ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಆನಡ್ಕ ಸ.ಹಿ. ಪ್ರಾ ಶಾಲೆಯ ಶಿಕ್ಷಕಿ ಶುಭಲತಾರಿಗೆ ಶಾಲೆಯ ಎಸ್ ಡಿ ಎಂಸಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಪೋಷಕರು ವಿದ್ಯಾರ್ಥಿಗಳು ಹಿರಿಯ ವಿದ್ಯಾರ್ಥಿಗಳು ಶಿಕ್ಷಕ ವೃಂದ ಅಡುಗೆ ಸಿಬ್ಬಂದಿಗಳು ಹಾಗೂ ಜನಪ್ರತಿನಿಧಿಗಳು ,ಊರ ಪರ ಊರದಾನಿಗಳ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಎಸ್‌ಡಿ ಎಂಸಿ ಅಧ್ಯಕ್ಷ ನಾರಾಯಣ ಸುವರ್ಣ ಆನಡ್ಕ, ಉಪಾಧ್ಯಕ್ಷೆ ರೂಪಲತ, ಗ್ರಾಮ ಪಂಚಾಯತ್ ಸದಸ್ಯರಾದ ಎಂ ದಿನೇಶ್ ಗೌಡ, ತಾರಾನಾಥ ,ನಿವೃತ್ತ ಕರ್ನಾಟಕ ಬ್ಯಾಂಕ್ ಉದ್ಯೋಗಿ ಜಯರಾಮ್ ಆಚಾರ್ , ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾರಣಪ್ಪ ಸಾಲಿಯಾನ್,ನರಿಮೊಗರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಉಮೇಶ್ ಹಾಗೂ ಗ್ರಾಮ ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷ ಸುಧಾಕರ್ ಕುಲಾಲ್ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here