ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕಬಡ್ಡಿ- ರಾಮಕುಂಜ ಕ.ಮಾ.ಪ್ರೌಢಶಾಲೆ ಪ್ರಥಮ

0

ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಇದರ ಆಶ್ರಯದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ತೆಂಕಿಲ ದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕಬಡ್ಡಿ ಪಂದ್ಯಾಟದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ.


ತಂಡದ ನಾಯಕ ಕಾರ್ತಿಕ್ ಬೆಸ್ಟ್ ರೈಡರ್ ಹಾಗೂ ಶ್ರೇಯಸ್ ಬೆಸ್ಟ್ ಕ್ಯಾಚರ್ ಪ್ರಶಸ್ತಿ ಪಡೆದರು. ಪ್ರೀತಮ್, ಸತ್ಯ, ಹಿತೇಶ್, ನಿತೇಶ್ ಗೌಡ, ಯಶವಂತ, ಮೌನೇಶ್, ದಿಲೀಪ್, ಮಹಮ್ಮದ್ ರೈಜ್, ಕೃತಿಕ್, ನಿಖಿಲ್ ಎನ್.ಡಿ., ಸಂನ್ವಿತ್ ತಂಡದ ಇತರೇ ಆಟಗಾರರಾಗಿದ್ದಾರೆ. ತಂಡಕ್ಕೆ ಮಾಧವ ಬಿ.ಕೆ, ಜಸ್ವಂತ್ ಹಾಗೂ ಮಂಜುನಾಥ್‌ರವರು ತರಬೇತಿ ನೀಡಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ಪೋಷಕರಾದ ನೊಣಯ್ಯ ಪೂಜಾರಿಯವರು ವಿದ್ಯಾರ್ಥಿಗಳಿಗೆ ಶೂ ನೀಡಿ ಸಹಕರಿಸಿದರು. ಪುತ್ತೂರಿನ ಎಸ್‌ಆರ್‌ಕೆ ಲ್ಯಾಡರ್ಸ್‌ನ ಮಾಲಕ ಕೇಶವ ಎ., ಪಿಡಬ್ಲ್ಯುಡಿ ಇಂಜಿನಿಯರ್ ಪ್ರಮೋದ್‌ರವರು ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಮ್ಯಾಟ್ ವ್ಯವಸ್ಥೆ ಮಾಡಿ ಸಹಕರಿಸಿದರು. ಶಾಲಾ ಮುಖ್ಯಗುರು ಸತೀಶ್ ಭಟ್, ಶಾಲಾ ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿಯವರು ಸಹಕರಿಸಿದ್ದರು.

LEAVE A REPLY

Please enter your comment!
Please enter your name here