ಸೆ.17: ಮೊಟ್ಟೆತ್ತಡ್ಕ ಮಜಲು ಕ್ಷೇತ್ರದಲ್ಲಿ ಹಗಲು ದೈವಗಳಿಗೆ ಸಂಕ್ರಮಣ ಕೋಲ,ಅಗೇಲು ಸೇವೆ

0

ಪುತ್ತೂರು:ಕಲಿಯುಗ ಕಲೆ,ಕಾರಣಿಕ ಇತಿಹಾಸ ಪ್ರಸಿದ್ಧ ಕ್ಷೇತ್ರವಾಗಿರುವ ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಮಜಲು ಸ್ವಾಮಿ ಕೊರಗಜ್ಜ, ಅಗ್ನಿ ಕಲ್ಲುರ್ಟಿ ದೈವಸ್ಥಾನದಲ್ಲಿ ಸೆ.17ರಂದು ತಿಂಗಳ ಸಂಕ್ರಮಣದಂಗವಾಗಿ ಮಧ್ಯಾಹ್ನ ದೈವಗಳಿಗೆ ಹಗಲು ಕೋಲ,ಅಗೇಲು ಸೇವೆ ನಡೆದು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.


ತುಳುನಾಡಿನ ನೇಮದ ನಿಯಮದಂತೆ ಮಹಾಲಿಂಗೇಶ್ವರ ದೇವರ ಆಶೀರ್ವಾದದೊಂದಿಗೆ ಕಾರ್ಯಕ್ರಮ ನಡೆಯುತ್ತದೆ.ಸ್ವಾಮಿ ಕೊರಗಜ್ಜ, ಅಗ್ನಿ ಕಲ್ಲುರ್ಟಿ ದೈವಗಳ ಸಂಗಮ ಸ್ಥಳವೆಂದೇ ಪ್ರಸಿದ್ಧಿಯಾಗಿರುವ ಶ್ರೀ ಕ್ಷೇತ್ರದಲ್ಲಿ ಇದೀಗ ಸಂಕ್ರಮಣ ಕೋಲ, ಅಗೇಲು ಸೇವೆಯೂ ಕ್ಷೇತ್ರದ ಕಟ್ಟಲೆಯಂತೆ ದೈವಗಳ ತೀರ್ಮಾನದೊಂದಿಗೆ ಹಗಲು ಹೊತ್ತಿನಲ್ಲಿಯೇ ನಡೆಯುತ್ತಿದೆ.ಸ್ವಾಮಿ ಕೊರಗಜ್ಜ, ಅಗ್ನಿ ಕಲ್ಲುರ್ಟಿ ದೈವಗಳು ಜೊತೆಯಾಗಿ ವರ, ಬೂಳ್ಯ,ಪ್ರಸಾದ, ನುಡಿಕಟ್ಟು ನೀಡುವುದು ವಿಶೇಷ ಎಂದು ಕ್ಷೇತ್ರದ ಧರ್ಮದರ್ಶಿ ಮಣಿಸ್ವಾಮಿ ತಿಳಿಸಿದ್ದಾರೆ.ಬೆಳಿಗ್ಗೆ 11 ಗಂಟೆಗೆ ದೈವಗಳಿಗೆ ಎಣ್ಣೆ ಕೊಡುವುದು, ಬಳಿಕ ಅಗ್ನಿ ಹಾಕುವುದು, ಮಧ್ಯಾಹ್ನ 12.30ಕ್ಕೆ ಭಂಡಾರ ಇಳಿದು ಅಗ್ನಿ ಸೇವೆಯಾಗಿ ಕೋಲೋತ್ಸವ, ಅಗೇಲು ಸೇವೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ಕ್ಷೇತ್ರದಲ್ಲಿ ಪ್ರತಿ ತಿಂಗಳ ಸಂಕ್ರಮಣದಂದು ಮಧ್ಯಾಹ್ನ 12 ಗಂಟೆಯಿಂದ ಕೆಂಡದರ್ಶನ ಸೇವೆ, ಅಗ್ನಿ ಕಲ್ಲುರ್ಟಿ ಮತ್ತು ಸ್ವಾಮಿ ಕೊರಗಜ್ಜ ದೈವಕ್ಕೆ ಕೋಲ, ಅಗೇಲು ಸೇವೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯುತ್ತದೆ.ಪ್ರತಿ ಆದಿತ್ಯವಾರ ಮಧ್ಯಾಹ್ನ ಸ್ವಾಮಿ ಕೊರಗಜ್ಜ ದೈವದ ಹಗಲು ಕೋಲ, ಅಗೇಲು ಸೇವೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯುತ್ತದೆ.ಪ್ರತಿ ಸೋಮವಾರ, ಮಂಗಳವಾರ, ಶುಕ್ರವಾರ ಮತ್ತು ಶನಿವಾರ ಪ್ರಶ್ನಾ ಚಿಂತನೆ ಹಾಗೂ ಬುಧವಾರ, ಗುರುವಾರ ಸೂಚಿತ ಪರಿಹಾರ ಕಾರ್ಯ ನಡೆಯುತ್ತದೆ.ಕೋಲ,ಅಗೇಲು ಸೇವೆ ಮಾಡಿಸುವವರು ಮೊ:9740463437 ಸಂಪರ್ಕಿಸುವಂತೆ ಕ್ಷೇತ್ರದ ಧರ್ಮದರ್ಶಿ ಮಣಿಸ್ವಾಮಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here