ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ಕೃಷ್ಣಾವತಾರ ಸಂದೇಶ ಮತ್ತು ಅಳವಡಿಕೆ ಕುರಿತ ವಿಶೇಷ ಉಪನ್ಯಾಸ

0

ಪುತ್ತೂರು : ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಕಲಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗಾಗಿ ಕೃಷ್ಣಾವತಾರ-ಸಂದೇಶ ಮತ್ತು ಅಳವಡಿಕೆ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕಾಲೇಜಿನ ವಾಣಿಜ್ಯ ವಿಭಾಗ ಮುಖ್ಯಸ್ಥ ಶ್ರೀಧರ್ ಶೆಟ್ಟಿಗಾರ್ ಶ್ರೀಕೃಷ್ಣನ ಬಾಲಲೀಲೆಗಳು ಮತ್ತು ಅವತಾರಗಳು ಯಾವ ರೀತಿಯಾಗಿ ಉತ್ತಮ ಪಾಠಗಳನ್ನು ತಿಳಿಸುತ್ತದೆ ಮತ್ತು ಶ್ರೀಕೃಷ್ಣನ ಭೋದನೆಗಳನ್ನು ಯಾವ ರೀತಿ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬಹುದು ಎಂಬುದರ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಭಗವದ್ಗೀತೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಕಾರ್ಯಕ್ರಮಕೆ ಶುಭ ಹಾರೈಸಿದರು. ಕಲಾ ಸಂಘದ ಸಂಯೋಜಕಿ ಮೋನಿಷಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಕಲಾ ಮತ್ತು ಸಂಖ್ಯಾಶಾಸ್ತ್ರ ವಿಭಾಗದ ಉಪನ್ಯಾಸಕರಾದ ಕವಿತ ಮತ್ತು ದಿವ್ಯ ಕೆ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಪವಿತ್ರ ಮತ್ತು ವ್ಯೆಷ್ಣವಿ ಪ್ರಾರ್ಥಿಸಿದರು. ವಿದ್ಯಾರ್ಥಿನಿ ಪೂರ್ವಿಕ ಸ್ವಾಗತಿಸಿ ಅನಘ ವಂದಿಸಿದರು. ವಿದ್ಯಾರ್ಥಿನಿ ತೃಪ್ತಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here