ಪ್ರಾಚ್ಯ ಪ್ರಜ್ಞೆ ಸ್ಪರ್ಧೆ: ರಾಮಕುಂಜ ಕ.ಮಾ.ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

0

ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಇದರ ಆಶ್ರಯದಲ್ಲಿ ಸರಕಾರಿ ಪ್ರೌಢಶಾಲೆ ಶಾಂತಿನಗರದಲ್ಲಿ ನಡೆದ “ಪ್ರಾಚ್ಯ ಪ್ರಜ್ಞೆ ” ಸ್ಪರ್ಧೆಯಲ್ಲಿ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದುಕೊಂಡಿದ್ದಾರೆ. ಹತ್ತನೇ ತರಗತಿಯ ವಿದ್ಯಾರ್ಥಿನಿ ಪ್ರಣಾಮ್ಯ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಹತ್ತನೇ ತರಗತಿಯ ಯಶಸ್ವಿನಿ ಹಾಗೂ ಒಂಬತ್ತನೇ ತರಗತಿಯ ಭವಿತ್ ಜಿ ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ನಗದು ಬಹುಮಾನವನ್ನು ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿಗಳಿಗೆ ಸಮಾಜ ವಿಜ್ಞಾನ ಶಿಕ್ಷಕ ವಿಘ್ನೇಶ್ ತರಬೇತಿ ನೀಡಿರುತ್ತಾರೆ. ಶಿಕ್ಷಕಿ ಅನುಷಾ ಎ., ಸಹಕರಿಸಿದ್ದರು. ಶಾಲಾ ಮುಖ್ಯಗುರು ಸತೀಶ್ ಭಟ್, ಶಿಕ್ಷಕ ವೃಂದ ಮತ್ತು ಪೋಷಕರ ವೃಂದದವರು ಸಕರಿಸಿದ್ದರು.

LEAVE A REPLY

Please enter your comment!
Please enter your name here