ಆಲಂಕಾರು ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಚ್ಚತಾ ಕಾರ್ಯಕ್ರಮ

0


ಆಲಂಕಾರು: ಆಲಂಕಾರು ಶ್ರೀ ದುರ್ಗಾಂಬಾ ಪದವಿಪೂರ್ವ ಕಾಲೇಜಿನಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರು ಮತ್ತುಕಾಲೇಜ್ ವಿದ್ಯಾರ್ಥಿಗಳ ಪೋಷಕರು ಶಾಲಾ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನೇರವೆರಿಸಿದರು.

ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ದಯಾನಂದ ರೈ ಮನವಳಿಕೆಗುತ್ತು ರವರು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮತ್ತು ಶಿಕ್ಷಕ ರಕ್ಷಕ ಸಂಘದ ಸದಸ್ಯರ ಸೇವೆಯನ್ನು ಸ್ಮರಿಸಿ ಧನ್ಯವಾದ ಸಮರ್ಪಿಸಿದರು. ಗ್ರಾಮ ಅಭಿವೃದ್ಧಿ ಯೋಜನೆಯ ಪದಾಧಿಕಾರಿಗಳು ಮತ್ತು ಸದಸ್ಯರು, ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಮತ್ತು ಸದಸ್ಯರು, ಕಾಲೇಜು ಪ್ರಾಂಶುಪಾಲರು, ಮುಖ್ಯ ಗುರುಗಳು, ಬೋಧಕ ಬೋಧಕೇತರ ವೃಂದದವರು ಸ್ವಚ್ಚತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

LEAVE A REPLY

Please enter your comment!
Please enter your name here