ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಗಣೇಶೋತ್ಸವಕ್ಕೆ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರ ತಂಡ ಭೇಟಿ

0

ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುವ ಸಾರ್ವಜನಿಕ ಶ್ರೀಗಣೇಶೋತ್ಸವಕ್ಕೆ ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಸಹಿತ ಪುತ್ತಿಲ ಪರಿವಾರ ತಂಡ ಸೆ.20ರಂದು ಭೇಟಿ ನೀಡಿ ಪೂಜೆ ಸಲ್ಲಿಸಿದರು.


ಸಮಿತಿಯ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ನುಳಿಯಾಲು ಬರಮಾಡಿಕೊಂಡರು. ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ನಗರ ಸಮಿತಿ ಅಧ್ಯಕ್ಷ ಅನಿಲ್ ತೆಂಕಿಲ, ಗಣೇಶೋತ್ಸವ ಸಮಿತಿ ಮಾಜಿ ಅಧ್ಯಕ್ಷ ಶಶಾಂಕ ಕೊಟೇಚಾ, ಸೇರಿದಂತೆ ಪುತ್ತಿಲ ಪರಿವಾರದ ಹಲವು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here