ಪಡುಮಲೆ  ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ

0

ಬಡಗನ್ನೂರುಃ  ಪಡುಮಲೆ  ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸೆ. 19 ರಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ವಿಜೃಂಭಣೆಯಿಂದ ಜರುಗಿತು.ಸೆ 19 ರಂದು  ಬೆಳಗ್ಗೆ ಗಂ 8 ಕ್ಕೆ ಕದಿರು ಪೂಜೆ,ಶ್ರೀ ಗಣಪತಿ ವಿಗ್ರಹ ಪ್ರತಿಷ್ಠೆ , ಮಹಾಗಣಪತಿ ಹೋಮ, ಮಧ್ಯಾಹ್ನ ಗಂ 1ಕ್ಕೆ  ಮಹಾಪೂಜೆ, ಪ್ರಸಾದ ವಿತರಣೆ, ಬಳಿಕ ಅನ್ನಸಂತರ್ಪಣೆ ನಡೆಯಿತು.. ಅಪರಾಹ್ನ 2 ರಿಂದ 4 ರವರೆಗೆ ಭಜನಾ ಕಾರ್ಯಕ್ರಮ ನಡೆದು,  ಬಳಿಕ ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.

ಸಂಜೆ ಗಂ 5.30ರಿಂದ  ಶ್ರೀ ಗಣಪತಿ ದೇವರ ಶೋಭಾಯಾತ್ರೆಯು  ಡಿಜೆ, ಗೊಂಬೆ ಕುಣಿತ, ಸಿಂಗರಿಮೇಳ,ಬ್ಯಾಂಡ್ ವಾದ್ಯ  ಹಾಗೂ ಶಾಲಾ ಮಕ್ಕಳ ಕುಣಿತ ಭಜನೆಯೊಂದಿಗೆ ಶ್ರೀ ದೇವಾಲಯದಿಂದ ಹೊರಟು  ಮೈಂದನಡ್ಕ -ಮುಡಿಪಿನಡ್ಕ ರಾಜರಸ್ತೆಮೂಲಕ  ಪಟ್ಟೆ  ಸೀರೆ ಹೊಳೆಯಲ್ಲಿ ಜಲಸ್ತಂಭನ ಮಾಡಲಾಗಿತ್ತು.ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳಿಗೆ ಗಣೇಶ ಭಕ್ತಿಗೀತೆ ಸ್ಪರ್ಧೆ, ,ಗಣೇಶನ ಚಿತ್ರ ಬಿಡಿಸುವುದು, ಮಹಿಳೆಯರಿಗೆ ಸಂಗೀತ ಕುರ್ಚಿಸ್ಪರ್ಧೆ ಆಯೋಜಿಸಲಾಗಿತ್ತು ಮತ್ತು ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ  ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮನೋಜ್ ರೈ ಪೇರಾಲು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಭಟ್ ಚಂದುಕೂಡ್ಲು, ಉತ್ಸವ ಸಮಿತಿ ಅಧ್ಯಕ್ಷ ರಾಮಣ್ಣ ಗೌಡ, ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಮತ್ತು ಸದಸ್ಯರು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here