ನರೇಂದ್ರ ಪ.ಪೂ.ಕಾಲೇಜಿನಲ್ಲಿ ಜೀವನಕ್ಕಾಗಿ ಅಧ್ಯಯನ ವಿಶೇಷ ಉಪನ್ಯಾಸ ಕಾರ‍್ಯಕ್ರಮ

0

ವಿದ್ಯಾರ್ಥಿ ಜೀವನದಲ್ಲಿ ಯಶಸ್ವಿಯಾಗಲು ದೈಹಿಕ ಮತ್ತು ಮಾನಸಿಕ ಆರೋಗ್ಯ ಅತ್ಯಗತ್ಯ. ಹದಿಹರೆಯದಲ್ಲಿ ಹುಡುಗ ಹುಡುಗಿಯರು ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಸಮಸ್ಯೆಗಳಿಗೆ ಒಳಗಾಗುತ್ತಾರೆ. ಈ ಸಮಯದಲ್ಲಿ ವೈಜ್ಞಾನಿಕವಾಗಿ ದೇಹದಲ್ಲಿ ಕೆಲವೊಂದು ಸಹಜ ಬದಲಾವಣೆಗಳಾಗುತ್ತವೆ. ಹರೆಯದಲ್ಲಿ ಜವಾಬ್ದಾರಿ ಅರಿತು ನಡೆದರೆ ಉತ್ತಮ ಬದುಕು ಕಟ್ಟಿಕೊಳ್ಳಬಹುದು. ಎಂದು ಪುತ್ತೂರಿನ ಮಕ್ಕಳ ತಜ್ಞರು ಮತ್ತು ಸೈಕೊತೆರಪಿಸ್ಟ್ ಆದ ಡಾ. ಸುಲೇಖ ಪಿ. ಎಮ್. ಹೇಳಿದರು.


ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿಜ್ಞಾನ ಸಂಘದ ವತಿಯಿಂದ ಆಯೋಜಿಸಲಾದ ಜೀವನಕ್ಕಾಗಿ ಅಧ್ಯಯನ ವಿಶೇಷ ಉಪನ್ಯಾಸ ಕಾರ‍್ಯಕ್ರಮದಲ್ಲಿ ಅವರು ಮಾತನಾಡಿದರು.
ಪಾಲಕರು ತಮ್ಮ ಮಕ್ಕಳೊಂದಿಗೆ ಮಾತನಾಡಬೇಕು ಏಕೆಂದರೆ ಹದಿಹರೆಯದವರು ಮತ್ತು ಹದಿಹರೆಯದವರಿಗೆ ಕುಟುಂಬದ ಬೆಂಬಲವು ಮುಖ್ಯವಾದ ಏಕೈಕ ವಿಷಯವಾಗಿದೆ. ಪೋಷಕರು ಅವರ ಮಾತನ್ನು ಯಾವುದೇ ನಿರ್ಣಯವಿಲ್ಲದೆ ಆಲಿಸಿದರೆ ಮತ್ತು ಅವರಿಗೆ ಸ್ವೀಕಾರ, ಪ್ರೀತಿ, ಗೌರವ ಮತ್ತು ಗುಣಮಟ್ಟದ ಸಮಯದ ಭಾವನಾತ್ಮಕ ಸಂಪನ್ಮೂಲಗಳನ್ನು ಒದಗಿಸಿದರೆ, ಮಕ್ಕಳು ಈ ಸಮಸ್ಯೆಗಳನ್ನು ಉತ್ತಮವಾಗಿ ನಿಭಾಯಿಸಬಹುದು. ಎಂದು ಹೇಳಿದರು.


ಹದಿಹರೆಯದ ಸಮಯದಲ್ಲಿ ಎಲ್ಲರಲ್ಲೂ ವಿಭಿನ್ನ ಭಾವನೆಗಳು ಮೂಡುತ್ತವೆ. ಬಹಳಷ್ಟು ವಿಚಾರಗಳಲ್ಲಿ ನಿರ್ಧಾರ ಕೈಗೊಳ್ಳುವಾಗ ಗೊಂದಲಗಳು ಏರ್ಪಡುತ್ತವೆ. ಇಂತಹ ಸಮಯದಲ್ಲಿ ಪೋ?ಕರೊಂದಿಗೆ, ಶಿಕ್ಷಕರೊಂದಿಗೆ ಅಥವಾ ಕುಟುಂಬದ ವೈದ್ಯರೊಂದಿಗೆ ಮುಕ್ತವಾಗಿ ಚರ್ಚಿಸಬೇಕು. ತಮ್ಮ ಜತೆ ಯಾರೇ ಅನುಚಿತವಾಗಿ ವರ್ತಿಸಿದರೂ ಧೈರ್ಯದಿಂದ ಪ್ರತಿಭಟಿಸುವ ಸಾಮರ್ಥ್ಯವನ್ನು ಹೆಣ್ಣುಮಕ್ಕಳು ಬೆಳೆಸಿಕೊಳ್ಳಬೇಕು. ಯುವಕರು ದುಶ್ಚಟಗಳಿಂದ ದೂರವಿರಬೇಕು. ನಿಯಮಿತ ವ್ಯಾಯಾಮಗಳಲ್ಲಿ ತೊಡಗಿಸಿಕೊಳ್ಳಲು ಪ್ರಯತ್ನಿಸಬೇಕು, ಅವರ ಸಮಸ್ಯೆ ಪರಿಹರಿಸುವ ಕೌಶಲ್ಯ ಮತ್ತು ಪರಸ್ಪರ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಬೇಕು, ಮತ್ತು ಭಾವನೆಗಳನ್ನು ಹೇಗೆ ನಿರ್ವಹಿಸಬೇಕು ಇತ್ಯಾದಿಗಳನ್ನು ಕಲಿಯಬೇಕು. ಇಂತಹ ಉಪನ್ಯಾಸ ಕಾರ‍್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಜೀವನದ ಸವಾಲುಗಳನ್ನು ಎದುರಿಸುವ ಬಗ್ಗೆ ಜಾಗೃತಿಯನ್ನು ಮೂಡಿಸುತ್ತವೆ. ಎಂದು ಹೇಳಿದರು.ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಉಪಸ್ಥಿತರಿದ್ದರು.ಕಾರ‍್ಯಕ್ರಮದಲ್ಲಿ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾದ ಕು. ಸಾಯಿಸಹನ ಸ್ವಾಗತಿಸಿ,ವಂದಿಸಿದರು.

LEAVE A REPLY

Please enter your comment!
Please enter your name here