ಪುಳಿತ್ತಡಿ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

0

ಉಪ್ಪಿನಂಗಡಿ: ಎಸ್‌ಡಿಎಂಸಿ ಸದಸ್ಯರು, ಸುರಕ್ಷಾ ಸಮಿತಿ ಸದಸ್ಯರು, ಊರವರು ಹಾಗೂ ಶಿಕ್ಷಕರು ಮತ್ತು ಹಳೆ ವಿದ್ಯಾರ್ಥಿಗಳು ಜೊತೆಗೂಡಿ ಇಲ್ಲಿನ ಪುಳಿತ್ತಡಿಯ ಮಠ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಠಾರವನ್ನು ಶ್ರಮದಾನದ ಮೂಲಕ ಸ್ವಚ್ಛಗೊಳಿಸಿದರು.


ಪದಾಳ ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮೊಕ್ತೇಸರ ಉದಯಶಂಕರ ಭಟ್ ಕಾರ್ಯಕ್ರಮ ಉದ್ಘಾಟಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ಕೆ. ಝಕಾರಿಯ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಉಪ್ಪಿನಂಗಡಿ ಸಿ.ಎ. ಬ್ಯಾಂಕಿನ ಉಪಾಧ್ಯಕ್ಷ ಸುನಿಲ್ ಕುಮಾರ್ ದಡ್ಡು, ಉಪ್ಪಿನಂಗಡಿ ಗ್ರಾ.ಪಂ. ಸದಸ್ಯ ಸುರೇಶ್ ಅತ್ರೆಮಜಲು, ಶಾಲಾ ಹಳೆವಿದ್ಯಾರ್ಥಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು, ಗ್ರಾ.ಪಂ. ಸಿಬ್ಬಂದಿ ಮಹಾಲಿಂಗ, ಎಸ್‌ಡಿಎಂಸಿ ಉಪಾಧ್ಯಕ್ಷೆ ಶ್ರೀಮತಿ ಗೀತಾ ಆರ್ತಿಲ, ನಿಕಟ ಪೂರ್ವಾಧ್ಯಕ್ಷ ಯಾದವ ಆರ್ತಿಲ, ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಶೋಕ್ ಪುಳಿತ್ತಡಿ, ಹಮೀದ್ ಪುಳಿತ್ತಡಿ, ಇಸಾಕ್ ಕಂಚಿಬೆಟ್ಟು, ಗಿರೀಶ್ ಮತ್ತಿತರರು ಉಪಸ್ಥಿತರಿದ್ದರು.
ಶಾಲಾ ಮುಖ್ಯಗುರು ಶ್ರೀಮತಿ ಜುಲಿಯಾನಾ ವಾಸ್ ಸ್ವಾಗತಿಸಿದರು. ಶಿಕ್ಷಕಿ ಶುಭಲತಾ ಕೆ. ವಂದಿಸಿ, ಕಾರ್ಯಕ್ರಮ ನಿರೂಪಿಸಿದರು. ಗೌರವ ಶಿಕ್ಷಕಿ ಶ್ರೀಮತಿ ನಸೀಮಾ ಸಹಕರಿಸಿದರು.

LEAVE A REPLY

Please enter your comment!
Please enter your name here