ಪೆರಿಯಡ್ಕ: ಉಪ್ಪಿನಂಗಡಿ ವಲಯ ಮಟ್ಟದ ಕ್ರೀಡಾಕೂಟದ ಪೂರ್ವಭಾವಿ ಸಭೆ

0

ಉಪ್ಪಿನಂಗಡಿ: ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಕ್ರೀಡಾಕೂಟದ ಪೂರ್ವಭಾವಿ ಸಭೆಯು ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಸರ್ವೋದಯ ಪ್ರೌಢಶಾಲೆ ಪೆರಿಯಡ್ಕ ಉಪ್ಪಿನಂಗಡಿ ಇಲ್ಲಿ ಸೆ.22ರಂದು ನಡೆಯಿತು.


ಸಂಸ್ಥೆಯ ಕಾರ್ಯದರ್ಶಿಯಾಗಿರುವ ಶ್ರೀ ಡಾ| ಧರ್ಮಪಾಲನಾಥ ಸ್ವಾಮೀಜಿಯವರು ಮಾತನಾಡಿ, ಕ್ರೀಡಾಕೂಟಕ್ಕೆ ಬೇಕಾಗುವ ಎಲ್ಲಾ ವ್ಯವಸ್ಥೆಯನ್ನು ಸಂಸ್ಥೆಯ ವತಿಯಿಂದ ಕಲ್ಪಿಸಿಕೊಡಲಾಗುವುದು. ಕ್ರೀಡಾಕೂಟದ ಯಶಸ್ವಿಗೆ ನಿಮ್ಮೆಲ್ಲರ ಸಹಕಾರ ನೀಡಬೇಕೆಂದು ಹೇಳಿದರು. ಕ್ರೀಡಾಕೂಟದ ನೋಡಲ್ ಅಧಿಕಾರಿಯಾದ ಚಕ್ರಪಾಣಿ ಹಾಗೂ ಜೋನ್ ಕೆ.ವಿ.ಯವರು ಕ್ರೀಡಾ ಚಟುವಟಿಕೆಗಳ ಬಗ್ಗೆ ತಿಳಿಸಿದರು. ದೈಹಿಕ ಶಿಕ್ಷಣ ಶಿಕ್ಷಕರು ಸಲಹೆ ಸೂಚನೆ ನೀಡಿದರು.


ಉಪ್ಪಿನಂಗಡಿ ವಲಯದ ಸಿಆರ್‌ಪಿ ಅಶ್ರಫ್, ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸೀತಾರಾಮ ಗೌಡ, ಕಡಬ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಕೃಷ್ಣ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ರಾಮಚಂದ್ರ ಗೌಡ, ಸಂಸ್ಥೆಯ ಪರಿವೀಕ್ಷಕರಾದ ಬಾಲಕೃಷ್ಣ ಬಿ.ಟಿ.ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯಿನಿ ಲಕ್ಷ್ಮಿ ಪಿ., ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕ್ರೀಡಾ ವಿಚಾರಗಳನ್ನು ದೈಹಿಕ ಶಿಕ್ಷಣ ಶಿಕ್ಷಕರಾದ ಮೋಹನ್ ಪರಿಚಯಿಸಿದರು. ಶಿಕ್ಷಕರಾದ ಶಕುಂತಲಾ ಕೆ, ಸವಿತಾ ಪಿ.ಸಿ., ಭವ್ಯ ವೈ, ರಜನಿ ಹೆಚ್., ಡೊಂಬಯ ಗೌಡ ಸಹಕರಿಸಿದರು.

LEAVE A REPLY

Please enter your comment!
Please enter your name here