ಇಂದ್ರಪ್ರಸ್ಥ ವಿದ್ಯಾ ಸಂಸ್ಥೆಯಲ್ಲಿ ಗಾಂಧಿ ಜಯಂತಿ ಆಚರಣೆ

0

ಉಪ್ಪಿನಂಗಡಿ : ಅಕ್ಟೋಬರ್ 2 ರಂದು ಇಲ್ಲಿನ ಇಂದ್ರಪ್ರಸ್ಥ ವಿದ್ಯಾಸಂಸ್ಥೆಯಲ್ಲಿ ರಾಷ್ಟಪಿತಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿಯವರ ಜನ್ಮ ದಿನವನ್ನು
ಆಚರಿಸಲಾಯಿತು. ಈ ವೇಳೆ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿಯವಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ 8 ನೇ ತರಗತಿ ವಿದ್ಯಾರ್ಥಿನಿ ಸಿಂಚನಾ ಭಟ್ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಯವರ ಕುರಿತು ಮಾತನಾಡಿ ಗಾಂಧೀಜಿ ಹಾಗೂ ಶಾಸ್ತ್ರೀಯವರ ಉತ್ತಮ ಆದರ್ಶಗಳನ್ನು ವಿದ್ಯಾರ್ಥಿಗಳಾದ ನಾವು ಮೈಗೂಡಿಸಿಕೊಳ್ಳಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ಇಂದ್ರಪ್ರಸ್ಥ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರಾದ ಹೆ.ಕೆ. ಪ್ರಕಾಶ್ , ಸಂಸ್ಥೆಯ ಮುಖ್ಯ ಶಿಕ್ಷಕಿಯಾದ ಶ್ರೀಮತಿ ವೀಣಾ ಆರ್ ಪ್ರಸಾದ್, ಉಪನ್ಯಾಸಕರು, ಶಿಕ್ಷಕ – ಶಿಕ್ಷಕೇತರ ವೃಂದ ಹಾಗೂ ಪೋಷಕವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here