ಅ.4: ಕೊಕ್ಕಡ ಜೇಸಿಐಗೆ ಜೇಸಿ ವಲಯಾಧ್ಯಕ್ಷರ ಭೇಟಿ

0

ನೆಲ್ಯಾಡಿ: ಜೇಸಿ ವಲಯ 15 ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಅವರು ಜೇಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ಅ.4ರಂದು ಅಧಿಕೃತ ಭೇಟಿ ನೀಡಲಿದ್ದಾರೆ.


ಸಂಜೆ 6.30ಕ್ಕೆ ಸಂತ ಜಾನರ ಶಾಲಾ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಅವರು ಕೊಕ್ಕಡ ಘಟಕದ ನೂತನ ವೆಬ್‌ಸೈಟ್ ಹಾಗೂ ಆಪ್ ಲೋಕಾರ್ಪಣೆ ಮಾಡಲಿದ್ದಾರೆ.
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆಯನ್ನು ಸಲ್ಲಿಸಿದ ಕೌಕ್ರಾಡಿ ಚರ್ಚ್ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ವಿಶಾಲಾಕ್ಷಿ ಬಿ, 108 ಆಂಬುಲೆನ್ಸ್ ಸಿಬ್ಬಂದಿ ವಿಲ್ಮಾ ಶ್ವೇತಾ ಸ್ಟ್ರೆಲ್ಲಾ,
ಹಿರಿಯ ಸದಸ್ಯರಾದ ಯು.ನರಸಿಂಹ ನಾಯಕ್, ನಾಟಿ ವೈದ್ಯರಾದ ಕೆ. ವಸಂತ ಪೂಜಾರಿ ಅವರಿಗೆ ಸನ್ಮಾನ ನಡೆಯಲಿದೆ. ಸ್ಥಳೀಯ ಸಂತ ಜಾನರ ಹಿ.ಪ್ರಾ. ಶಾಲೆಯಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಆದ್ಯ, ಯೋಶಿತಾ, ವಿವಿಯನ್ ಸುವಾರಿಸ್, ಅಂಜನಾ, ರಿಷಿಕ್, ಮನಸ್ವಿ, ಕಿಶನ್, ಶ್ರವಣ್, ವೈಷ್ಣವ್, ಧನ್ಯಶ್ರೀ , ಆಕಾಶ್, ವೀಕ್ಷಾ, ಉಜ್ವಲ್, ರಾಯನ್, ಸಾಧನಾ, ನೇತೃಶ್ರೀ, ಚೈತ್ರೇಶ್, ಜಯ, ಪ್ರೆಸಿಲ್ಲಾ, ಮಾನ್ಯಶ್ರೀ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು. ಈ ಸಮಾರಂಭದಲ್ಲಿ ಜೇಸಿ ವಲಯ ೧೫ರ ಉಪಾಧ್ಯಕ್ಷರಾದ ಭರತ್ ಶೆಟ್ಟಿ, ವಲಯಾಧಿಕಾರಿ ಕಾರ್ತಿಕ್ ಬಿ. ಭಾಗವಹಿಸುವವರು. ಸಭೆಗೆ ಎಲ್ಲರಿಗೂ ಮುಕ್ತ ಸ್ವಾಗತವಿದೆ ಎಂದು ಕೊಕ್ಕಡ ಜೇಸಿಐ ಘಟಕಾಧ್ಯಕ್ಷರಾದ ಜಿತೇಶ್ ಎಲ್ ಪಿರೇರಾ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here