![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು ಪಾಣಾಜೆ ಲಯನ್ಸ್ ಕ್ಲಬ್ ವತಿಯಿಂದ ಅ.2ರಂದು ಗಾಂಧೀ ಜಯಂತಿಯ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ಇರ್ದೆ ಬೆಟ್ಟಂಪಾಡಿ ಗ್ರಾಮದ ಪೇರಲ್ತಡ್ಕದಲ್ಲಿ ಹಮ್ಮಿಕೊಳ್ಳಲಾಯಿತು.
ಪುತ್ತೂರು-ಪಾಣಾಜೆ ಲಯನ್ಸ್ ಕ್ಲಬ್ನ ಅಧ್ಯಕ್ಷ ಲ.ಮಹಮ್ಮದ್ ಕುಕ್ಕುವಳ್ಳಿ ಎಂಜೆಎಫ್ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಹಲವಾರು ಪದಾಧಿಕಾರಿಗಳು, ಸದಸ್ಯರುಗಳು ಹಾಗೂ ಊರವರು ಸೇರಿ ಸುಮಾರು 25 ಮಂದಿ ಭಾಗವಹಿಸಿದ್ದರು.
![](https://puttur.suddinews.com/wp-content/uploads/2023/10/546.jpg)