![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
![](https://puttur.suddinews.com/wp-content/uploads/2023/10/c31f97aa-9440-413f-bb7d-252209e6fa9a.jpg)
ಉಪ್ಪಿನಂಗಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಠ ಪುಳಿತ್ತಡಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿಜೀ ಅವರ ಜನ್ಮದಿನವನ್ನು ಆಚರಿಸಲಾಯಿತು.
ಸರ್ವ ಧರ್ಮ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಮಕ್ಕಳು ಮಹಾತ್ಮ ಗಾಂಧಿಜೀ ಬಗ್ಗೆ ಭಾಷಣ ಮಾಡಿದರು. ಶಾಲಾ ಎಸ್ಡಿಎಂಸಿ ಅಧ್ಯಕ್ಷ ಕೆ. ಝಕಾರಿಯಾ ಅಧ್ಯಕ್ಷತೆ ವಹಿಸಿದ್ದರು. ನಿಕಟಪೂರ್ವಾಧ್ಯಕ್ಷ ಯಾದವ, ಸುರಕ್ಷಾ ಸಮಿತಿಯ ಸದಸ್ಯ ರಾಜೇಶ್ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಜೂಲಿಯಾನ ವಾಸ್ ಸ್ವಾಗತಿಸಿದರು. ಶಿಕ್ಷಕರಾದ ರಮಣಿ ವಂದಿಸಿದರು. ಶುಭಲತಾ ಕೆ. ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರಾದ ಪುನಂತೇಶ್ವರಿ, ನಸೀಮ ಸಹಕರಿಸಿದರು.